ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಜಿಲ್ಲಾ ಪಂಚಾಯತ ಮತ್ತು ಗೋಗಟೆ ಇನಸ್ಟಿಟ್ಯೂಟ್ ಆಪ್ ಟೆಕ್ನಾಲಜಿ ಒಡಂಬಡಿಕೆ
🏡 ಗ್ರಾಮ
Dr. K N Doddmani · · 66 ವೀಕ್ಷಣೆಗಳು

ಜಿಲ್ಲಾ ಪಂಚಾಯತ ಮತ್ತು ಗೋಗಟೆ ಇನಸ್ಟಿಟ್ಯೂಟ್ ಆಪ್ ಟೆಕ್ನಾಲಜಿ ಒಡಂಬಡಿಕೆ

ವೃತ್ತಿಪರ ಅಧ್ಯಯನ ವಿದ್ಯಾರ್ಥಿಗಳು ಮಾಡಿದ ಅಧ್ಯಯನ, ಕೈಗೊಂಡ ಸಂಶೋಧನೆ ಯಶಸ್ಸು ಸಾಧಿಸಬೇಕಾದರೆ ಪ್ರಾಯೋಗಿಕವಾಗಿ ಸಾರ್ವಜನಿಕ ಸಂಪರ್ಕ ಸಾಧಿಸುವುದು ಅಗತ್ಯ. ಅದರಲ್ಲೂ ವಿಶೇಷವಾಗಿ ಬದಲಾಗುತ್ತಿರುವ ಗ್ರಾಮಗಳ ಸ್ಥಿತಿಗತಿಗಳ ಅರಿವಿನ ಜೊತೆಗೆ ಅವುಗಳ ಸಕಾರಾತ್ಮಕ ಅಭಿವೃದ್ಧಿ ಯತ್ತ ಯುವ ಸಮುದಾಯ ಮುಂದಾಗಬೇಕಾದ ತುರ್ತು ಅಗತ್ಯದ ಸಂದರ್ಭದಲ್ಲಿ ಒಂದು ಸರ್ಕಾರಿ ಇಲಾಖೆ, ಖಾಸಗಿ ಶಿಕ್ಷಣ ಸಂಸ್ಥೆಯೊಂದಿಗೆ ಕೈಜೋಡಿಸಿರುವುದು ಸ್ವಾಗತಾರ್ಹ ಬೆಳವಣಿಗೆ

ಜಿಲ್ಲಾ ಪಂಚಾಯತ ಮತ್ತು ಗೋಗಟೆ ಇನಸ್ಟಿಟ್ಯೂಟ್ ಆಪ್ ಟೆಕ್ನಾಲಜಿ ಒಡಂಬಡಿಕೆ

ಅಸ್ಮಿತೆ ಸುದ್ದಿ: ಇಂಜಿನಿಯರಿಂಗ್ ವಿದ್ಯಾರ್ಥಿಗಳು ಗ್ರಾಮೀಣ ಭಾಗದ ಜನರ ಸ್ಥಿತಿಗತಿ ಅಧ್ಯಯನ ಮಾಡುವುದು ಹಾಗೂ ಜನರಲ್ಲಿ ಸ್ವಚ್ಛತೆ, ಸಮುದಾಯ ಸಹಭಾಗಿತ್ವ, ನೀರಿನ ಬಳಕೆ ಹಾಗೂ ಇನ್ನಿತರೇ ವಿಷಯಗಳ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ ಹಾಗೂ ಗೋಗಟೆ ಇನಸ್ಟಿಟ್ಯೂಟ್ ಆಪ್ ಟೆಕ್ನಾಲಜಿ ಪರಸ್ಪರ ಒಡಂಬಡಿಕೆ ಮಾಡಿಕೊಂಡಿವೆ.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮತ್ತು ಕೆ.ಎಲ್.ಎಸ್. ಗೋಗಟೆ ಇನಸ್ಟಿಟ್ಯೂಟ್ ಆಪ್ ಟೆಕ್ನಾಲಜಿಯ ಗೌರ್ನಿಂಗ ಕೌನ್ಸಿಲ್ ಚೇರಮನ್ ರಾಜೇಂದ್ರ ಬೆಳಗಾವಕರ್ ಅವರು ಇಂದು ಕಾಲೇಜಿನ ಸಭಾಂಗಣದಲ್ಲಿ ಈ ಕುರಿತು ಚರ್ಚಿಸಿ, ಒಡಂಬಡಿಕೆಗೆ ಸಹಿ ಹಾಕಿದರು.

ಗ್ರಾಪಂಗಳ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಿಂದ ಜಾಗೃತಿ:

ಈ ಒಡಂಬಡಿಕೆಯ ಭಾಗವಾಗಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಡಿಜಿಟಲ್ ಸಾಕ್ಷರತೆ, ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ, ಸ್ವಸಹಾಯ ಸಂಘಗಳ ಆರ್ಥಿಕ ಅಭಿವೃದ್ಧಿ, ಶಾಲಾ ಮಕ್ಕಳಿಗೆ ಎಐ ಟೆಕ್ನಾಲಜಿ ಬಳಕೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಜಾಗೃತಿ ಮೂಡಿಸಲಿದ್ದಾರೆ. ಜೊತೆಗೆ ವಿವಿಧ ಯೋಜನೆಗಳ ದತ್ತಾಂಶಗಳ ಸಂಗ್ರಹಣೆ ಹಾಗೂ ಸರ್ಕಾರಿ ಯೋಜನೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಪ್ರಯೋಜನಗಳ ಕುರಿತು ಅಧ್ಯಯನ ನಡೆಸಲಿದ್ದಾರೆ.

ಈ ಸಂದರ್ಭದಲ್ಲಿ ಗೌರ್ನಿಂಗ ಕೌನ್ಸಿಲ್ ಸದಸ್ಯರಾದ ಉದಯ ಕುಲಕುಂದ್ರಿಕರ, ಆರ್.ಎಸ್. ಮುತಾಲಿಕ, ಕೆಎಲ್ಎಸ್ ಸಂಸ್ಥೆಯ ಕಾರ್ಯದರ್ಶಿ ಎಸ್.ವಿ. ಗಣಾಚಾರಿ, ಜಿಲ್ಲಾ ಪಂಚಾಯತ ಸಹಾಯಕ ಯೋಜನಾಧಿಕಾರಿ ಭಾಗ್ಯಶ್ರೀ ಜಹಾಗೀರದಾರ, ಪ್ರಾಂಶುಪಾಲ ಡಾ. ವಿಜಯ ಅಟಾವಲೆ, ಡೀನ್ (ಆಡಳಿತ) ಡಿ.ಎ. ಕುಲಕರ್ಣಿ, ಡಾ. ಸಂಜಯ ದೇಶಪಾಂಡೆ ಸೇರಿ ಜಿಲ್ಲಾ ಪಂಚಾಯತ ಹಾಗೂ ಕಾಲೇಜಿನ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಹಕ್ಕಿ-ಪಿಕ್ಕಿ ಸಮುದಾಯದ ಮೂಲಭೂತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಮಟ್ಟದಲ್ಲಿ ಕ್ರಮ - ಸಿಇಓ ಗ್ರಾಮ

ಹಕ್ಕಿ-ಪಿಕ್ಕಿ ಸಮುದಾಯದ ಮೂಲಭೂತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಮಟ್ಟದಲ್ಲಿ ಕ್ರಮ - ಸಿಇಓ

ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಅವರಲ್ಲಿರುವ ಕೌಶಲ್ಯಗಳನ್ನು ಗುರುತಿಸಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗದ ಅವಕಾಶಗಳನ್ನು ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು

Admin
ಮಂಗಾವತಿ :   ಸೇವಾ ನಿವೃತ್ತ ಹಾಗೂ ಪ್ರತಿಭಾ ಸಾಧಕರಿಗೆ ಗೌರವ ಸನ್ಮಾನ ಗ್ರಾಮ

ಮಂಗಾವತಿ :   ಸೇವಾ ನಿವೃತ್ತ ಹಾಗೂ ಪ್ರತಿಭಾ ಸಾಧಕರಿಗೆ ಗೌರವ ಸನ್ಮಾನ

ಕಬ್ಬಿನಿಂದ ಕಬ್ಬಿಗೆ ನಿರ್ಧಿಷ್ಟ ಅಂತರ ಕಾಯ್ದುಕೊಂಡು ಬೆಳೆಯಲ್ಲಿ ಸಾಕಷ್ಟು ಗಾಳಿಯಾಡುವಂತೆ ಮಾಡಿದರೆ, ಕಬ್ಬು ಪೂರ್ಣ ಪ್ರಮಾಣದಲ್ಲಿ ಬೆಳೆದು ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಾಗುತ್ತದೆ. ಸಾವಯವ ಮಾದರಿಯಿಂದ ಒಂದ ಎಕರೆಗೆ ಒಂದು ನೂರರಿಂದ 120 ಟನ್‌ ಇಳುವರಿ ಪಡೆಯಲು ಸಾಧ್ಯವಿದೆ. ಕಬ್ಬು ಕಟಾವ್‌ ಮಾಡಿದ ಮೇಲೆ ಅದರ ರವದಿ ಸುಡದೆ ಅಲ್ಲಿಯೇ ಬಿಟ್ಟು ಸಾವಯವ ಗೊಬ್ಬರವನ್ನಾಗಿಸಬೇಕು - ತಳಿ ತಜ್ಞರಿಂದ ವಿಶೇಷ ಉಪನ್ಯಾಸ

Admin