ಬ್ರೇಕಿಂಗ್
ಗೊತ್ತುವಳಿ ಅಂಗೀಕರಿಸದಿದ್ದರೆ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಯೊಂದಿಗೆ ಚರ್ಚೆ - ಸಚಿವ ಯತೀಂದ್ರ ಸಿದ್ಧರಾಮಯ್ಯ ಎಚ್ಚರಿಕೆ ಸಕಾಲಕ್ಕೆ ಮಾಹಿತಿ‌ ಒದಗಿಸದ ತಹಶೀಲ್ದಾರ ಸೇರಿ ಮೂವರಿಗೆ ತಲಾ 10 ಸಾವಿರ ದಂಡ “ಪ್ರಾಚೀನ ಬೌದ್ಧ ತಾಣ ಸಾರನಾಥ” ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರ್ಪಡೆ ಕಾರ್ಗಿಲ್ ವಿಜಯೋತ್ಸವ : ಮರಾಠಾ ಲಘು ಪದಾತಿದಳದ ಸೈನಿಕರ ಸಾಹಸ ಸುವರ್ಣಾಕ್ಷರ ಕಾರ್ಗಿಲ್‌ ವಿಜಯೋತ್ಸವ ನಿಮಿತ್ತ ಬೈಕ್‌ ರ್ಯಾಲಿ ವಿಶ್ವದ TEDx ಭಾಷಣಗಾರ್ತಿ ಗಿನ್ನೆಸ್ ದಾಖಲೆ ಅರ್ನಾ ಜೇವನಗೌಡರಿಗೆ ಜಿಲ್ಲಾ ಆಡಳಿತ ಸನ್ಮಾನ ಮೌಂಟ್ ಎವರೆಸ್ಟ್ ಏರಿದ ಸಂತೋಷ್ ಹಾಗೂ ಚಿನ್ಮಯಿಗೆ ಗೌರವ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ ಸರ್ಕಾರಿ ಶಾಲೆಗಳನ್ನು ಉದ್ಯಮಿಗಳು ದತ್ತಕ ತೆಗೆದುಕೊಳ್ಳಬಹುದು : ಸಿಇಓ ಬೆಳಗಾವಿ ಜಿಲ್ಲೆಯ 175 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ  ಅಭಿವೃದ್ಧಿ ಪಡಿಸಲು ಸರ್ಕಾರ ನಿರ್ಧಾರ ಗೊತ್ತುವಳಿ ಅಂಗೀಕರಿಸದಿದ್ದರೆ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಯೊಂದಿಗೆ ಚರ್ಚೆ - ಸಚಿವ ಯತೀಂದ್ರ ಸಿದ್ಧರಾಮಯ್ಯ ಎಚ್ಚರಿಕೆ ಸಕಾಲಕ್ಕೆ ಮಾಹಿತಿ‌ ಒದಗಿಸದ ತಹಶೀಲ್ದಾರ ಸೇರಿ ಮೂವರಿಗೆ ತಲಾ 10 ಸಾವಿರ ದಂಡ “ಪ್ರಾಚೀನ ಬೌದ್ಧ ತಾಣ ಸಾರನಾಥ” ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರ್ಪಡೆ ಕಾರ್ಗಿಲ್ ವಿಜಯೋತ್ಸವ : ಮರಾಠಾ ಲಘು ಪದಾತಿದಳದ ಸೈನಿಕರ ಸಾಹಸ ಸುವರ್ಣಾಕ್ಷರ ಕಾರ್ಗಿಲ್‌ ವಿಜಯೋತ್ಸವ ನಿಮಿತ್ತ ಬೈಕ್‌ ರ್ಯಾಲಿ ವಿಶ್ವದ TEDx ಭಾಷಣಗಾರ್ತಿ ಗಿನ್ನೆಸ್ ದಾಖಲೆ ಅರ್ನಾ ಜೇವನಗೌಡರಿಗೆ ಜಿಲ್ಲಾ ಆಡಳಿತ ಸನ್ಮಾನ ಮೌಂಟ್ ಎವರೆಸ್ಟ್ ಏರಿದ ಸಂತೋಷ್ ಹಾಗೂ ಚಿನ್ಮಯಿಗೆ ಗೌರವ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ ಸರ್ಕಾರಿ ಶಾಲೆಗಳನ್ನು ಉದ್ಯಮಿಗಳು ದತ್ತಕ ತೆಗೆದುಕೊಳ್ಳಬಹುದು : ಸಿಇಓ ಬೆಳಗಾವಿ ಜಿಲ್ಲೆಯ 175 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ  ಅಭಿವೃದ್ಧಿ ಪಡಿಸಲು ಸರ್ಕಾರ ನಿರ್ಧಾರ
29 ಜುಲೈ 2026
ಕಾರ್ಗಿಲ್ ವಿಜಯೋತ್ಸವ : ಮರಾಠಾ ಲಘು ಪದಾತಿದಳದ ಸೈನಿಕರ ಸಾಹಸ ಸುವರ್ಣಾಕ್ಷರ
📄 ಬೆಳಗಾವಿ ಜಿಲ್ಲೆಯ ಸುದ್ದಿ
Dr. K N Doddmani · · 36 ವೀಕ್ಷಣೆಗಳು

ಕಾರ್ಗಿಲ್ ವಿಜಯೋತ್ಸವ : ಮರಾಠಾ ಲಘು ಪದಾತಿದಳದ ಸೈನಿಕರ ಸಾಹಸ ಸುವರ್ಣಾಕ್ಷರ

ಅಸ್ಮಿತೆ ವರದಿ, ಜು.26: ಬೆಳಗಾವಿಯ ಮರಾಠಾ ಲೈಟ್ ಇನ್‌ಫೆಂಟ್ರಿ ರೆಜಿಮೆಂಟಲ್ ಸೆಂಟರ್ (ಮರಾಠಾ ಲಘು ಪದಾತಿದಳ)ದಲ್ಲಿ ಇಂದು  26ನೇ ಕಾರ್ಗಿಲ್ ವಿಜಯ್ ದಿವಸ್ ಅನ್ನು ಆಚರಿಸಲಾಯಿತು.  ಯುದ್ಧ ಸ್ಮಾರಕಕ್ಕೆ ಪುಷ್ಪಾಚಾರಣೆ ಮಾಡಿ ಯೋಧರಿಗೆ ಗೌರವ

ಶ್ರದ್ಧಾಂಜಲಿ ಸಲ್ಲಿಸಿ, 1999 ರ ಕಾರ್ಗಿಲ್ ಯುದ್ಧದಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ವೀರ ಸೈನಿಕರಿಗೆ ಸಾಹಸಕ್ಕೆ ನಮನ ಸಲ್ಲಿಸಲಾಯಿತು.

ಮರಾಠಾ ಎಲ್‌ಐಆರ್‌ಸಿಯ ಕಮಾಂಡೆಂಟ್ ಬ್ರಿಗೇಡಿಯರ್ ಗಿರೀಶ್ ಉಪಾಧ್ಯ ಅವರು, ಕಾರ್ಗಿಲ್ ಹೋರಾಟದಲ್ಲಿ ಗೆಲವು ತಂದುಕೊಟ್ಟ ಯೋಧರ ಅಪ್ರತಿಮ ಧೈರ್ಯ, ಅಚಲ ಸಮರ್ಪಣೆ ಮತ್ತು ನಿಸ್ವಾರ್ಥ ಸೇವೆ ಅನನ್ಯವಾದದ್ದು.  ಸೈನಿಕರ ಇತಿಹಾಸದಲ್ಲಿ ಅತ್ಯಂತ ಸವಾಲಿನ ಮಹೋನ್ನತ ಸಂಘರ್ಷವಾಗಿದ್ದು, ಭಾರತದ ಗೆಲವಿನ ಐತಿಹಾಸಿಕ ಸ್ಮರಣೆಯಾಗಿದೆ ಎಂದು ತಿಳಿಸಿದರು.

ಕಾರ್ಗಿಲ್ ವಿಜಯ ರೆಜಿಮೆಂಟ್‌ನ ಶಾಶ್ವತ ಶೌರ್ಯದ ಪರಂಪರೆ ಹಾಗೂ ಮುಂದಿನ ಪೀಳಿಗೆಗೆ ಸೇವಾ ಮನೋಭಾವವನ್ನು ರವಾನಿಸುವುದನ್ನು ಸಂಕೇತಿಸುತ್ತದೆ.   ಧೀರ ಸೈನಿಕರು ತಮ್ಮ ಅನುಕರಣೀಯ ಧೈರ್ಯದ ಮೂಲಕ ರೆಜಿಮೆಂಟ್‌ನ ಹೆಸರನ್ನು ಸುವರ್ಣಾಕ್ಷರಗಳಲ್ಲಿ ಕೆತ್ತಿದ್ದಾರೆ ಎಂದು ತಿಳಿಸಿದರು.

ಸಮಾರಂಭದಲ್ಲಿ ರೆಜಿಮೆಂಟಲ್ ಸೆಂಟರ್‌ನ ಅಧಿಕಾರಿಗಳು, ಜೆಸಿಒಗಳು, ಇತರ ಶ್ರೇಣಿಗಳು ಮತ್ತು ಅಗ್ನಿವೀರರು ಭಾಗವಹಿಸಿದ್ದರು, ಅವರು ಮಡಿದ ವೀರರಿಗೆ ಶ್ರದ್ಧಾಂಜಲಿ ಸಲ್ಲಿಸಿದರು ಮತ್ತು ಕಾರ್ಗಿಲ್ ಯೋಧರ ಧೈರ್ಯ, ದೇಶಭಕ್ತಿ ಮತ್ತು ಅತ್ಯುನ್ನತ ತ್ಯಾಗದಿಂದ ಪ್ರೇರಿತರಾಗಿ ಭಾರತೀಯ ಸೇನೆಯ ಅತ್ಯುನ್ನತ ಸಂಪ್ರದಾಯಗಳನ್ನು ಎತ್ತಿಹಿಡಿಯುವ ಬದ್ಧತೆಯನ್ನು ಪುನರುಚ್ಚರಿಸಿದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ