ಬ್ರೇಕಿಂಗ್
ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ ತುಂಬಿದ ಜೀವಜಲ : ಹಸಿರಾದ ಇಳೆ, ಖುಷಿಗೊಂಡ ರೈತ ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ ವಿಟಿಯು ಜಾಗತಿಕ ಮಟ್ಟದ ಖ್ಯಾತಿಗೆ ಗುಣಮಟ್ಟದ ಶಿಕ್ಷಣ ಅಳವಡಿಕೆ ಅಗತ್ಯ : ಕುಲಪತಿ ವಿದ್ಯಾಶಂಕರ್ ಸಲಹೆ ಮಳೆಯಾಗುತ್ತಿದ್ದು ಸದ್ಯ ಆತಂಕ ನಿವಾರಣೆ : ಸಚಿವ ಸತೀಶ ಜಾರಕಿಹೊಳಿ ಮೇಘಮೈತ್ರಿ ಸಾಹಿತ್ಯ ಸಂಭ್ರಮ: ಸಂಘ - ಸಂಸ್ಥೆಗಳ ಪ್ರಶಸ್ತಿ ಪ್ರದಾನ ಪರಂಪರೆ  ಗೌರವಯುತ ಕಾರ್ಯ - ಎಚ್.ಐ. ತಿಮ್ಮಾಪುರ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು? ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : 397  ಕಾಳಜಿ ಕೇಂದ್ರಗಳ ಸೌಲಭ್ಯ ಪರಿಶೀಲನೆಗೆ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸೂಚನೆ ತುಂಬಿದ ಜೀವಜಲ : ಹಸಿರಾದ ಇಳೆ, ಖುಷಿಗೊಂಡ ರೈತ ಸರ್ಕಾರದ ಸೂಚನೆ ಬೆಳಗಾವಿ ಪಾಲಿಕೆ ಪಾಲಿಸದಿದ್ದರೆ ಸೂಪರ್ ಸೀಡ್ ಮಾಡಬಹುದು - ಸಚಿವರಿಗೆ ಕನ್ನಡ ಸಂಘಟನೆಗಳ ಮನವರಿಕೆ ವಿಟಿಯು ಜಾಗತಿಕ ಮಟ್ಟದ ಖ್ಯಾತಿಗೆ ಗುಣಮಟ್ಟದ ಶಿಕ್ಷಣ ಅಳವಡಿಕೆ ಅಗತ್ಯ : ಕುಲಪತಿ ವಿದ್ಯಾಶಂಕರ್ ಸಲಹೆ ಮಳೆಯಾಗುತ್ತಿದ್ದು ಸದ್ಯ ಆತಂಕ ನಿವಾರಣೆ : ಸಚಿವ ಸತೀಶ ಜಾರಕಿಹೊಳಿ ಮೇಘಮೈತ್ರಿ ಸಾಹಿತ್ಯ ಸಂಭ್ರಮ: ಸಂಘ - ಸಂಸ್ಥೆಗಳ ಪ್ರಶಸ್ತಿ ಪ್ರದಾನ ಪರಂಪರೆ  ಗೌರವಯುತ ಕಾರ್ಯ - ಎಚ್.ಐ. ತಿಮ್ಮಾಪುರ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು?
08 ಜುಲೈ 2026
232 ಗ್ರೇಡ್-2 ತಹಶೀಲ್ದಾರ್‌ಗಳಿಗೆ ಗ್ರೇಡ್-1 ತಹಶೀಲ್ದಾರ್ ಹುದ್ದೆಗೆ ಬಡ್ತಿ
📄 ಕರ್ನಾಟಕ ಸುದ್ದಿ
Dr. K N Doddmani · · 61 ವೀಕ್ಷಣೆಗಳು

232 ಗ್ರೇಡ್-2 ತಹಶೀಲ್ದಾರ್‌ಗಳಿಗೆ ಗ್ರೇಡ್-1 ತಹಶೀಲ್ದಾರ್ ಹುದ್ದೆಗೆ ಬಡ್ತಿ

ಕಂದಾಯ ಅಧಿಕಾರಿಗಳ ದೀರ್ಘಕಾಲದ ಕಾಯುವಿಕೆಗೆ ಅಂತ್ಯ: ಅರ್ಹತೆಯ ಮನ್ನಣೆ ಹಾಗೂ ಆಡಳಿತ ಯಂತ್ರದ ಬಲವರ್ಧನೆ

ಅಸ್ಮಿತೆ ಸುದ್ದಿ: ಗ್ರೇಡ್-2 ತಹಶೀಲ್ದಾರ್‌ ಹುದ್ದೆಯಿಂದ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಬೇಕೆಂಬ ಬಹುಕಾಲದ ಬೇಡಿಕೆ ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಸರ್ಕಾರವು ಇದನ್ನು ಆದ್ಯತೆಯ ಮೇರೆಗೆ ಪರಿಗಣಿಸಿ, ಅರ್ಹತೆಗೆ ಅನುಸಾರವಾಗಿ ಬಡ್ತಿ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು,ಇದು ಕೇವಲ ಆಡಳಿತಾತ್ಮಕ ಮೈಲುಗಲ್ಲಷ್ಟೇ ಅಲ್ಲ. ಬದಲಿಗೆ ನ್ಯಾಯಬದ್ಧ, ಪಾರದರ್ಶಕ ಹಾಗೂ ಸಮಯೋಚಿತ ನಿರ್ಧಾರಗಳ ಮೂಲಕ ಆಡಳಿತ ಯಂತ್ರವನ್ನು ಬಲಪಡಿಸುವ ಸರ್ಕಾರದ ದೃಢವಾದ ಬದ್ಧತೆಯಾಗಿದೆ.

ಒಟ್ಟು 232 ಗ್ರೇಡ್-2 ತಹಶೀಲ್ದಾರ್‌ಗಳಿಗೆ ಗ್ರೇಡ್-1 ತಹಶೀಲ್ದಾರ್ ಹುದ್ದೆಗೆ ಬಡ್ತಿ ನೀಡಲಾಗಿದೆ. ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಮೂಲಕ, "ಸರ್ಕಾರವು ಅರ್ಹತೆ, ಬದ್ಧತೆ ಮತ್ತು ಪ್ರಾಮಾಣಿಕತೆಯನ್ನು ಗುರುತಿಸಿ ಸದಾ ಪ್ರೋತ್ಸಾಹಿಸುತ್ತದೆ" ಎಂಬ ವಿಶ್ವಾಸವನ್ನು ನೌಕರ ವರ್ಗದಲ್ಲಿ ಮೂಡಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂಬ ನಂಬಿಕೆ ನನಗಿದೆ ಎಂದು ತಿಳಿಸಿದ್ದಾರೆ.

ಬಲಿಷ್ಠ ಮತ್ತು ಸ್ಫೂರ್ತಿದಾಯಕ ಆಡಳಿತ ಯಂತ್ರವೇ ಪರಿಣಾಮಕಾರಿ ಆಡಳಿತದ ಬುನಾದಿ. ಕಂದಾಯ ಇಲಾಖೆಯು ಪ್ರತಿಯೊಬ್ಬ ನಾಗರಿಕರಿಗೂ ಪಾರದರ್ಶಕ, ಉತ್ತರದಾಯಿ ಹಾಗೂ ಕಾಳಜಿಯುಕ್ತ ಸೇವೆಯನ್ನು ಒದಗಿಸಬೇಕೆಂಬ ರಾಜ್ಯ ಸರ್ಕಾರದ ಸಂಕಲ್ಪದ ಭಾಗವೇ ಈ ಮಹತ್ವದ ನಿರ್ಧಾರವಾಗಿದೆ. ಈ ಕಾರ್ಯವನ್ನು ಸುಗಮವಾಗಿ ಸಾಕಾರಗೊಳಿಸಿದ ಎಲ್ಲಾ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ನಿರಂತರ ಪ್ರಯತ್ನಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.

ದೀರ್ಘಕಾಲದ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಅವರೆಲ್ಲರ ಶ್ರಮ ಮತ್ತು ಸಹಕಾರವು ಮುಂಬರುವ ದಿನಗಳಲ್ಲಿ ಇಂತಹ ಮತ್ತಷ್ಟು ನಿರ್ಧಾರಗಳನ್ನು ಕೈಗೊಳ್ಳಲು ನಮಗೆ ಸ್ಫೂರ್ತಿದಾಯಕವಾಗಿದೆ.

ಕಂದಾಯ ಇಲಾಖೆಯ ಪ್ರತಿಯೊಬ್ಬ ಅಧಿಕಾರಿಯ ಗಮನಕ್ಕೆ ತರಬಯಸುವ ಪ್ರಮುಖ ವಿಚಾರವೆಂದರೆ - ಸರ್ಕಾರವು ನಿಮ್ಮ ಸೇವಾ ಬದ್ಧತೆಯನ್ನು ಗುರುತಿಸುತ್ತದೆ, ನಿಮ್ಮ ಕಳಕಳಿಯನ್ನು ಆಲಿಸುತ್ತದೆ ಹಾಗೂ ನಿಮ್ಮ ಆಕಾಂಕ್ಷೆಗಳನ್ನು ಸಹ ಪರಿಗಣಿಸುತ್ತದೆ. ಸ್ವಯಂಸ್ಫೂರ್ತಿಯಿಂದ ಕಾರ್ಯನಿರ್ವಹಿಸುವ ಅಧಿಕಾರಿ ವರ್ಗವು ಯಾವುದೇ ಸರ್ಕಾರಕ್ಕೆ ಅತಿ ದೊಡ್ಡ ಆಸ್ತಿ. ನ್ಯಾಯಯುತವಾದ, ಸಮಾನ ಅವಕಾಶಗಳಿರುವ ಹಾಗೂ ವೃತ್ತಿ ನೈಪುಣ್ಯತೆಗೆ ಒತ್ತು ನೀಡುವ ಆಡಳಿತ ಸಂಸ್ಕೃತಿಯನ್ನು ನಿರ್ಮಿಸಲು ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದ್ದಾರೆ.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು? ಕರ್ನಾಟಕ ಸುದ್ದಿ

ಫುಟ್ ಪಾತ್ ಪಾದಚಾರಿಗಳ ಹಕ್ಕು; ಹಾದಿಮ್ಯಾಲಿನವರ ಬದುಕಿನ ಹಕ್ಕಿನ ದಿಕ್ಕು?

ಪದಚಾರಿಗಳ ಹಕ್ಕು ಸ್ಥಾಪಿಸಲು ಹೊರಟಿರುವ ಸಂದರ್ಭದಲ್ಲಿ ಸಚಿವ  ಕೃಷ್ಣ ಬೈರೇಗೌಡರು ಹಾಗು ಜನಪ್ರತಿನಿಧಿತ್ವದ ಸರ್ಕಾರ, ಕಾರ್ಯರೂಪಕ್ಕಾಗಿ ಕ್ಷೇತ್ರಕ್ಕೆ ಇಳಿಯುವ ಆಡಳಿತ ವ್ಯವಸ್ಥೆ  ಬೀದಿ ಬದಿ ವ್ಯಾಪಾರಿಗಳು ಯಾಕಿದ್ದಾರೆ ಎಂಬುದನ್ನೂ ಗಮನಿಸಬೇಕಿದೆ. ಭಾರತದ ಜನರ ದುಡಿಮೆಯ ಅವಕಾಶ, ಆದಾಯ, ಕುಟುಂಬ ನಿರ್ವಹಣೆಯ ಕನಿಷ್ಟ ಖರ್ಚುಗಳು, ಸಾಮಾಜಿಕ ಸಮೀಕರಣಗಳನ್ನೂ ಗಮನಿಸಬೇಕಿದೆ ಎಂದು ನಾಗರಿಕ ಸಮಾಜ ಮಾತನಾಡಿಕೊಳ್ಳುತ್ತಿದೆ.

Admin
ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಏಕೀಕೃತ ಮಾರ್ಗಸೂಚಿ ಬಿಡುಗಡೆಗೊಳಿಸಿದ ಗೃಹ ಸಚಿವರು ಕರ್ನಾಟಕ ಸುದ್ದಿ

ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಏಕೀಕೃತ ಮಾರ್ಗಸೂಚಿ ಬಿಡುಗಡೆಗೊಳಿಸಿದ ಗೃಹ ಸಚಿವರು

ಗೃಹ ಇಲಾಖೆಯ ಹೊಸ ಮಾರ್ಗಸೂಚಿಗಳ ಮೂಲಕ, ಪೊಲೀಸ್ ಇಲಾಖೆಯ ವಿವಿಧ ಹಂತಗಳಲ್ಲಿ ಮಾಧ್ಯಮಗಳಿಗೆ ನೀಡಲಾಗುವ ಮಾಹಿತಿ, ಅಪರಾಧ ಪ್ರಕರಣಗಳ ತನಿಖಾ ವಿವರಗಳು ಹಾಗೂ ಸಾರ್ವಜನಿಕ ಪ್ರಕಟಣೆಗಳ ಕುರಿತು ಸ್ಪಷ್ಟ ನಿಯಮಾವಳಿ ಜಾರಿಗೆ ತರಲಾಗಿದೆ

Admin
ಬೆಳಗಾವಿ  ಗಡಿ ವಿಷಯ ಕಾನೂನಾತ್ಮಕವಾಗಿ ಸರ್ಕಾರ   ಗಂಭೀರವಾಗಿ ಪರಿಗಣಿಸಲು ಕನ್ನಡ ಮನಸ್ಸುಗಳ ಒಕ್ಕೊರಲ ಆಗ್ರಹ ಕರ್ನಾಟಕ ಸುದ್ದಿ

ಬೆಳಗಾವಿ  ಗಡಿ ವಿಷಯ ಕಾನೂನಾತ್ಮಕವಾಗಿ ಸರ್ಕಾರ ಗಂಭೀರವಾಗಿ ಪರಿಗಣಿಸಲು ಕನ್ನಡ ಮನಸ್ಸುಗಳ ಒಕ್ಕೊರಲ ಆಗ್ರಹ

ಗಡಿ ದಾವೆಯನ್ನು ಪ್ರಾಥಮಿಕ ಹಂತದಲ್ಲಿಯೇ ನ್ಯಾಯಾಲಯವು ತಿರಸ್ಕರಿಸುವಂತೆ ಸೂಕ್ತ ಕಾನೂನು ಕ್ರಮವನ್ನು ರಾಜ್ಯ ಸರಕಾರ ಕೈಕೊಳ್ಳಬೇಕು. ಬೆಳಗಾವಿ ಗಡಿಗೆ ಸಂಬಂಧಿಸಿದಂತೆ ರಚಿಸಲಾದ ಗಡಿ ಸಂರಕ್ಷಣಾ ಆಯೋಗ ಬೆಂಗಳೂರಿನ ಬಹುಮಹಡಿ ಕಟ್ಟಡದಲ್ಲಿದ್ದು ಅದನ್ನು ಬೆಳಗಾವಿಯ ಸುವರ್ಣ ಸೌಧಕ್ಕೆ ಸ್ಥಳಾಂತರಿಸಬೇಕು - ಆಗ್ರಹ

Admin