ಬ್ರೇಕಿಂಗ್
ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ ಗಿರೀಶ್ ಕಾರ್ನಾಡರ 'ತುಘಲಕ್' ನಾಟಕದ ಓದು: "ವೇದಿಕೆಯ ಸಿದ್ಧತೆಗೆ ಓದು ಮೊದಲ ಹೆಜ್ಜೆ; ಕಾರ್ನಾಡ್ ರ ನಾಟಕ ಸಮಕಾಲೀನ ವೈರುದ್ಯಗಳ ಪ್ರತಿಬಿಂಬ" ವಿನೋಧ ಜಾಧವ ಅವರಿಗೆ ಪಿಎಚ್.ಡಿ. ಡಾಕ್ಟರೇಟ್ ಬೆಳಗಾವಿಯ ICMR ದಲ್ಲಿ ರಾಷ್ಟ್ರೀಯ ಉನ್ನತ ಮಟ್ಟದ ಸಭೆ - ಆಯುಷ್ - ಆಧುನಿಕ‌ ಔಷಧಿ ಹೊಸ ಪ್ರಯೋಗ ಶಿಕ್ಷಕಿ ಶುಭಾ ಹೆಗಡೆಗೆ ಬೇಲಾ ಟೀಚರ್ಸ್ ಅವಾರ್ಡ್ ಮರಾಠಾ ಎಲ್‌ಐಆರ್‌ಸಿ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ 'ಛಾತ್ರೋಂ ಕಿ ಗೂಂಜ್' -'ವಿದ್ಯಾರ್ಥಿಗಳ ಪ್ರತಿಧ್ವನಿ' ಅಭಿಯಾನದ ಮೂಲಕ ಶೈಕ್ಷಣಿಕ ಬದಲಾವಣೆಗೆ ಸರ್ಕಾರ ನಿರ್ಧಾರ ಸ್ವಯಂ ಪ್ರೇರಿತ ರಕ್ತದಾನ : 4634 ಯುನಿಟ್ ದಾಖಲಾರ್ಹ ರಕ್ತ ಸಂಗ್ರಹಣೆ ದಲಿತರು ಆರ್ಥಿಕತೆ ಸಬಲತೆಗೆ ಆಧ್ಯತೆ ನೀಡಬೇಕು - ಎಸ್. ಪಿ. ತಳವಾರ ಜನರನ್ನು ವಿಭಜಿಸುವ  ವಿಷಾದನೀಯ ಬೆಳವಣಿಗೆ : ಎಚ್.ಬಿ. ರಾಜಶೇಖರ ಕೂಲಿ ನೇಕಾರ ಕಾರ್ಮಿಕ ಕಲ್ಯಾಣ ಮಂಡಳಿ ಸ್ಥಾಪನೆಗೆ ಕಾರ್ಮಿಕರ  ಸಂಘಟಿತ ಹೋರಾಟ
19 ಸೆಪ್ಟೆಂ 2026
ಬರ ನಿರ್ವಹಣೆಗೆ ಕ್ರಿಯಾ ಯೋಜನೆ : ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ
📄 ಕರ್ನಾಟಕ ಸುದ್ದಿ
Dr. K N Doddmani · · 66 ವೀಕ್ಷಣೆಗಳು

ಬರ ನಿರ್ವಹಣೆಗೆ ಕ್ರಿಯಾ ಯೋಜನೆ : ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ

ವಾಡಿಕೆಯಂತೆ ಮುಂಗಾರು ಮಳೆಯಾಗದೇ ಹೋದರೆ ಕಂಡರಿಯದ ಭೀಕರ ಬರ ಪರಿಸ್ಥಿತಿ ಎದುರಿಸಬೇಕಾಗುತ್ತದೆ.  ಆವಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿಯಮನುಸಾರ ಬರಪರಿಸ್ಥಿತಿಯನ್ನು ಘೋಷಿಸಲಾಗುವುದು ಎಂದು ಕಂದಾಯ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ

ಬರ ನಿರ್ವಹಣೆಗೆ ಕ್ರಿಯಾ ಯೋಜನೆ : ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ

ಅಸ್ಮಿತೆ ಸುದ್ದಿ : ಜೂನ ತಿಂಗಳಲ್ಲಿ ಆಗಬೇಕಾದ ಮುಂಗಾರ ಮಳೆ ಇದುವರೆಗೆ ಕೇವಲ ಪ್ರತಿಶತ ೨೫ ರಿಂದ ೩೦ ರಷ್ಟ ಆಗಿದೆ. ಇದರಿಂದ ಕುಡಿಯುವ ನೀರಿನ ಕೊರತೆ ಎದುರಾಗಿದೆ. ಕೃಷಿ ಕಾರ್ಯ ಕುಂಠಿತಗೊAಡಿದೆ. ನೀರಿನ ಸಂಗ್ರಹ ಕೊನೆಯ ಹಂತ ತಲುಪಿದೆ. ಅಂತರಜಲ ಮಟ್ಟ ಇಳಿಕೆಯಾಗಿದೆ. ಈ ಎಲ್ಲ ಸಮಸ್ಯೆಗಳ ಸಮರ್ಪಕ ನಿರ್ವಹಣೆಗೆ ಸರಕಾರ ರಾಜ್ಯ ಮಟ್ಟದಲ್ಲಿ ಹಿರಿಯ ಅಧಿಕಾರಿಗಳಿಂದ ಕೂಡಿದ ಕ್ರಿಯಾ ಯೋಜನೆಯನ್ನು ನಿರ್ಮಿಸಲಾಗಿದ್ದು, ಅದನ್ನು ಆಯಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ, ಕಂದಾಯ ಸಚಿವ ಡಾ. ಈ.ಪರಮೇಶ್ವರ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನೀರಿನ ಕೊರತೆ ಹೆಚ್ಚಾಗಿರುವುದರಿಂದ ಲಭ್ಯ ಇರುವ ನೀರನ್ನು ಕುಡಿಯುವುದಕ್ಕೆ ಮಾತ್ರ ಬಳಸಲು ಆಧ್ಯತೆ ನೀಡಲಾಗಿದೆ. ಕುಡಿಯುವ ನೀರು ಪೂರೈಸಲು ಖಾಸಗಿ ಬಾವಿ, ಕೊಳವೆ ಬಾವಿಗಳಿಂದ ಖರೀದಿ ಪೂರೈಸಲಾಗುವುದು. ಇರುವ ಕೊಳವೆ ಬಾವಿಗಳಲ್ಲಿ ನೀರು ಬತ್ತಿಹೋದರೆ ಹೊಸ ಕೊಳವೆಬಾವಿಗಳನ್ನು ಕೊರೆದು ಸಮಸ್ಯೆ ನಿವಾರಣೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಇದಕ್ಕಾಗಿ ಈಗಾಗಲೇ ರಾಜ್ಯದ ಪ್ರತಿ ಜಿಲ್ಲಾಧಿಕಾರಿ ಕಚೇರಿಗಳಲ್ಲಿ ೫ ಕೋಟಿ ರೂಪಾಯಿ ಹಣ ಲಭ್ಯವಿದೆ ಎಂದು ತಿಳಿಸಿದರು.
ವಾಡಿಕೆಯಂತೆ ಮುಂಗಾರು ಮಳೆಯಾಗದೇ ಹೋದರೆ ಕಂಡರಿಯದ ಭೀಕರ ಬರ ಪರಿಸ್ಥಿತಿ ಎದುರಿಸಬೇಕಾಗುತ್ತದೆ.  ಆವಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿಯಮನುಸಾರ ಬರಪರಿಸ್ಥಿತಿಯನ್ನು ಘೋಷಿಸಲಾಗುವುದು ಎಂದು ಸಚಿವ ಜಿ.ಪರಮೇಶ್ವರ ತಿಳಿಸಿದರು.

ಕಂದಾಯ ಇಲಾಖೆ ವತಿಯಿಂದ ನೂತನ ತಂತ್ರಜ್ಞಾನದ ಸಹಾಯದಿಂದ ಕಂದಾಯ ಗ್ರಾಮ ಘೋಷಣೆ, ಹಕ್ಕುಪತ್ರ ವಿತರಣೆಯಂತಹ ಕೆಲಸಗಳು ನಡೆಯುತ್ತಿದ್ದು, ಇದಕ್ಕೆ ಇನ್ನಷ್ಟು ತೀವ್ರತೆ ನೀಡಿ ನಿಗದ ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದರು.

ರಾಜ್ಯದ ದೇವಸ್ಥಾನಗಳ ಜಮೀನು ಒತ್ತುವರಿಯಾಗಿದ್ದರೆ ಪರಿಶೀಲಿಸಿ ತೆರವುಗೊಳಿಸಿ ಧಾರ್ಮಿಕ ಇಲಾಖೆಯ ವ್ಯಾಪ್ತಿಗೆ ಒಪ್ಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.  ಎ ಮತ್ತು ಬಿ ವರ್ಗದ ದೇವಸ್ಥಾನಗಳಿಂದ ದೊರೆಯುವ ಹಣವನ್ನು ಆಯಾ ದೇವಸ್ಥಾನಗಳ ಅಭಿವೃದ್ಧಿಗೆ ಪ್ರಾಧಿಕಾರದ ಮೂಲಕ  ಮತ್ತು ಸರ್ಕಾರದ ಅನುಮತಿ ಪಡೆದು ಬಳಸಿ, ಭಕ್ತಿರಿಗೆ ಅಗತ್ಯ ಸೌಲಭ್ಯ ಒದಗಿಸಲು ಸೂಚಿಸಲಾಗಿದೆ. ದೇವಸ್ಥಾನದ ಹಣ ದುರುಪಯೋಗ ಆಗದಂತೆ ಎಚ್ಚರ ವಹಿಸಲಾಗಿದ್ದು, ಉನ್ನತ ಮಟ್ಟದ ಪರಿಶೀಲನಾ ಸಮಿತಿಯನ್ನು ರಚಿಸಲಾಗಿದೆ ಎಂದ ತಿಳಿಸಿದರು.

ಕ್ರೀಡಾ ಇಲಾಖೆಯ ಜವಾಬ್ದಾರಿಯನ್ನೂ ಹೊಂದಿರುವ ಸಚಿವ ಜಿ. ಪರಮೇಶ್ವರ ಅವರು, ಕ್ರೀಡಾಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತಿದ್ದು, ಜಿಲ್ಲಾ ಮಟ್ಟದಲ್ಲಿ ಹಾಗೂ ಸರಕಾರಿ ಶಾಲಾ ಕಾಲೇಜುಗಳಲ್ಲಿ ಅಗತ್ಯ ಕ್ರೀಡಾ ಸೌಲಭ್ಯಗಳನ್ನು ನೀಡುವುದರ ಮೂಲಕ ಉತ್ತೇಜನ ನೀಡಲಾಗುವುದು. ಕ್ರೀಡಾ ಪಟುಗಳಿಗೆ ಅವರ ಸಾಧೆಯ ಅನುಸಾರ ಎಲ್ಲ ಇಲಾಖೆಗಳ ನೇಮಕಾತಿಯಲ್ಲಿ ಪ್ರತಿಶತ ೨ ರಷ್ಟು ಅವಕಾಶ ಕಲ್ಪಿಸಲಾಗುತ್ತಿದ್ದು, ಈಗಾಗಲೇ ಗೃಹ ಇಲಾಖೆಯಲ್ಲಿ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.
**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕರ್ನಾಟಕ ಸುದ್ದಿ

'ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ, 2026'ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ

ಇದು ಯಾವುದೋ ಒಂದು ನಿರ್ದಿಷ್ಟ ಸಂಸ್ಥೆ, ಸಂಘ, ಸಂಘಟನೆ, ಸೊಸೈಟಿ, ಕ್ಲಬ್, ಒಕ್ಕೂಟ, ಸಿಂಡಿಕೇಟ್ ಅಥವಾ ಎನ್‌ಜಿಒವನ್ನು ನಿರ್ಬಂಧಿಸಲು ಅಥವಾ ಮಟ್ಟಹಾಕಲು ಎಂದು ಎಲ್ಲರೂ ಯಾಕೆ ಭಾವಿಸುತ್ತಿದ್ದಾರೋ? ಇದು ಯಕ್ಷ ಪ್ರಶ್ನೆ!

Admin