ಬ್ರೇಕಿಂಗ್
ಗೊತ್ತುವಳಿ ಅಂಗೀಕರಿಸದಿದ್ದರೆ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಯೊಂದಿಗೆ ಚರ್ಚೆ - ಸಚಿವ ಯತೀಂದ್ರ ಸಿದ್ಧರಾಮಯ್ಯ ಎಚ್ಚರಿಕೆ ಸಕಾಲಕ್ಕೆ ಮಾಹಿತಿ‌ ಒದಗಿಸದ ತಹಶೀಲ್ದಾರ ಸೇರಿ ಮೂವರಿಗೆ ತಲಾ 10 ಸಾವಿರ ದಂಡ “ಪ್ರಾಚೀನ ಬೌದ್ಧ ತಾಣ ಸಾರನಾಥ” ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರ್ಪಡೆ ಕಾರ್ಗಿಲ್ ವಿಜಯೋತ್ಸವ : ಮರಾಠಾ ಲಘು ಪದಾತಿದಳದ ಸೈನಿಕರ ಸಾಹಸ ಸುವರ್ಣಾಕ್ಷರ ಕಾರ್ಗಿಲ್‌ ವಿಜಯೋತ್ಸವ ನಿಮಿತ್ತ ಬೈಕ್‌ ರ್ಯಾಲಿ ವಿಶ್ವದ TEDx ಭಾಷಣಗಾರ್ತಿ ಗಿನ್ನೆಸ್ ದಾಖಲೆ ಅರ್ನಾ ಜೇವನಗೌಡರಿಗೆ ಜಿಲ್ಲಾ ಆಡಳಿತ ಸನ್ಮಾನ ಮೌಂಟ್ ಎವರೆಸ್ಟ್ ಏರಿದ ಸಂತೋಷ್ ಹಾಗೂ ಚಿನ್ಮಯಿಗೆ ಗೌರವ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ ಸರ್ಕಾರಿ ಶಾಲೆಗಳನ್ನು ಉದ್ಯಮಿಗಳು ದತ್ತಕ ತೆಗೆದುಕೊಳ್ಳಬಹುದು : ಸಿಇಓ ಬೆಳಗಾವಿ ಜಿಲ್ಲೆಯ 175 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ  ಅಭಿವೃದ್ಧಿ ಪಡಿಸಲು ಸರ್ಕಾರ ನಿರ್ಧಾರ ಗೊತ್ತುವಳಿ ಅಂಗೀಕರಿಸದಿದ್ದರೆ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಯೊಂದಿಗೆ ಚರ್ಚೆ - ಸಚಿವ ಯತೀಂದ್ರ ಸಿದ್ಧರಾಮಯ್ಯ ಎಚ್ಚರಿಕೆ ಸಕಾಲಕ್ಕೆ ಮಾಹಿತಿ‌ ಒದಗಿಸದ ತಹಶೀಲ್ದಾರ ಸೇರಿ ಮೂವರಿಗೆ ತಲಾ 10 ಸಾವಿರ ದಂಡ “ಪ್ರಾಚೀನ ಬೌದ್ಧ ತಾಣ ಸಾರನಾಥ” ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರ್ಪಡೆ ಕಾರ್ಗಿಲ್ ವಿಜಯೋತ್ಸವ : ಮರಾಠಾ ಲಘು ಪದಾತಿದಳದ ಸೈನಿಕರ ಸಾಹಸ ಸುವರ್ಣಾಕ್ಷರ ಕಾರ್ಗಿಲ್‌ ವಿಜಯೋತ್ಸವ ನಿಮಿತ್ತ ಬೈಕ್‌ ರ್ಯಾಲಿ ವಿಶ್ವದ TEDx ಭಾಷಣಗಾರ್ತಿ ಗಿನ್ನೆಸ್ ದಾಖಲೆ ಅರ್ನಾ ಜೇವನಗೌಡರಿಗೆ ಜಿಲ್ಲಾ ಆಡಳಿತ ಸನ್ಮಾನ ಮೌಂಟ್ ಎವರೆಸ್ಟ್ ಏರಿದ ಸಂತೋಷ್ ಹಾಗೂ ಚಿನ್ಮಯಿಗೆ ಗೌರವ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ ಸರ್ಕಾರಿ ಶಾಲೆಗಳನ್ನು ಉದ್ಯಮಿಗಳು ದತ್ತಕ ತೆಗೆದುಕೊಳ್ಳಬಹುದು : ಸಿಇಓ ಬೆಳಗಾವಿ ಜಿಲ್ಲೆಯ 175 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ  ಅಭಿವೃದ್ಧಿ ಪಡಿಸಲು ಸರ್ಕಾರ ನಿರ್ಧಾರ
29 ಜುಲೈ 2026
ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ
📄 ಕರ್ನಾಟಕ ಸುದ್ದಿ
Dr. K N Doddmani · · 126 ವೀಕ್ಷಣೆಗಳು

ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ

"ಕೆಲವರು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಆದರೆ 50% ಉದ್ಯಮಿಗಳು ಈ ಸಿಎಸ್ಆರ್ ನಿಧಿ ದುರುಪಯೋಗ ಮಾಡುತ್ತಿದ್ದಾರೆ. ಹೀಗಾಗಿ ಪ್ರತ್ಯೇಕ ಅಧಿಕಾರಿಗಳ ತಂಡ ನೇಮಿಸಿ ನಿಧಿಯನ್ನು ಎಲ್ಲೆಲ್ಲಿ ಬಳಸಲಾಗುತ್ತಿದೆ ಎಂದು ಪರಿಶೀಲನೆ ಮಾಡಲಾಗುವುದು”

ಅಸ್ಮಿತೆ ವರದಿ, ಜುಲೈ, 23: “ನಗರ ಪ್ರದೇಶಗಳಲ್ಲಿ 50 ಸಾವಿರಕ್ಕಿಂತ ಹೆಚ್ಚು ಶುಲ್ಕ ಪಡೆಯುತ್ತಿರುವ ಶಾಲೆಗಳು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ಪಡೆಯಬೇಕು. ಒಂದು ವೇಳೆ ಈ ಶಾಲೆಗಳು ದತ್ತು ಪಡೆಯದೇ ಇದ್ದರೆ ಈ ಶಾಲೆಗಳ ಶುಲ್ಕಗಳಿಗೆ ಮಿತಿ ಹಾಕಲಾಗುವುದು” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕಡಕ್ಕಾದ ಸಂದೇಶ ರವಾನಿಸಿದ್ದಾರೆ.

ಬೆಂಗಳೂರು ನಗರದ ಕೆ.ಜಿ ರಸ್ತೆಯಲ್ಲಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ ಕೆಸಿಸಿಐ)ಯ ಎಂ.ವಿ ಸಭಾಂಗಣದಲ್ಲಿ ಎಫ್‌ಕೆಸಿಸಿಐ ಜಾಗತಿಕ ಸಿಎಸ್ಆರ್ ಮತ್ತು ಸುಸ್ಥಿರ ಅಭಿವೃದ್ಧಿ ಶೃಂಗಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ರಾಜ್ಯದಲ್ಲಿ ಸುಮಾರು 10 ಸಾವಿರ ಕೋಟಿಯಷ್ಟು ಸಿಎಸ್ಆರ್ ನಿಧಿ ಇದ್ದು, ಇದರ ಪ್ರತಿಯೊಂದು ಪೈಸೆ ಗ್ರಾಮೀಣ ಭಾಗದ ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗವಾಗಬೇಕು” ಎಂದು ಡಿ ಕೆ ಶಿವಕುಮಾರ್ ಸೂಚಿಸಿದರು.

“ದತ್ತು ಪಡೆದ ಈ ಶಾಲೆಗಳು ಸರ್ಕಾರಿ ಶಾಲೆಗಳ ಕಟ್ಟಡ ನಿರ್ಮಾಣಕ್ಕೆ ಹಣ ಹಾಕುವುದು ಬೇಡ, ಅವರು ಕೇವಲ ಬೋಧಕರನ್ನು ನಿಯೋಜಿಸಿದರೆ ಸಾಕು. ನಮ್ಮ ರಾಜ್ಯದಲ್ಲಿ ಶಿಕ್ಷಕರ ಕೊರತೆ ಇದೆ. ಸರ್ಕಾರಿ ಶಾಲಾ ಶಿಕ್ಷಕರಿಗೆ ನಾವು ಖಾಸಗಿ ಶಾಲೆಗಳಿಗಿಂತ ಉತ್ತಮ ವೇತನ ನೀಡುತ್ತಿದ್ದೇವೆ. ನೀವೆಲ್ಲರೂ ಇದರ ಭಾಗವಾಗಬೇಕು. ನಾನು ಕೂಡ ಮೂರು ಶಾಲೆ ನಡೆಸುತ್ತಿದ್ದೇನೆ. ನಮ್ಮ ಶಾಲೆಗಳು ಕೂಡ ಗ್ರಾಮೀಣ ಭಾಗದ ಸರ್ಕಾರಿ ಶಾಲೆ ದತ್ತು ಪಡೆಯಬೇಕು ಎಂದು ನನ್ನ ಮಗಳಿಗೆ ತಿಳಿಸಿದ್ದೇನೆ. ಆಕೆ ಮೂರು ಶಾಲೆ ದತ್ತು ಪಡೆದಿದ್ದಾರೆ” ಎಂದು ತಿಳಿಸಿದರು.

“ನಾವು ಅಧಿಕಾರಕ್ಕೆ ಬಂದ ಬಳಿಕ ನಮ್ಮ ಸಚಿವರ ಜೊತೆ ಚರ್ಚೆ ಮಾಡಿ, ಸಿಎಸ್ಆರ್ ನಿಧಿಯನ್ನು ಶಿಕ್ಷಣ ಕ್ಷೇತ್ರಕ್ಕೆ ಬಳಸಲು ತೀರ್ಮಾನಿಸಿದ್ದೇವೆ. ಕೆಲವರು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಆದರೆ 50% ಉದ್ಯಮಿಗಳು ಈ ಸಿಎಸ್ಆರ್ ನಿಧಿ ದುರುಪಯೋಗ ಮಾಡುತ್ತಿದ್ದಾರೆ. ಹೀಗಾಗಿ ಪ್ರತ್ಯೇಕ ಅಧಿಕಾರಿಗಳ ತಂಡ ನೇಮಿಸಿ ನಿಧಿಯನ್ನು ಎಲ್ಲೆಲ್ಲಿ ಬಳಸಲಾಗುತ್ತಿದೆ ಎಂದು ಪರಿಶೀಲನೆ ಮಾಡಲಾಗುವುದು” ಎಂದು ಹೇಳಿದರು.

“ಗ್ರಾಮೀಣ ಭಾಗದ ಮಕ್ಕಳಿಗೆ ನಗರ ಪ್ರದೇಶದಂತೆ ಗುಣಮಟ್ಟದ ಶಿಕ್ಷಣ ಸಿಗಬೇಕು. ಹೀಗಾಗಿ ನಾವು ನೀತಿ ರೂಪಿಸುತ್ತಿದ್ದು, ಎಲ್ಲರೂ ಸಿಎಸ್ಆರ್ ನಿಧಿಯನ್ನು ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗಿಸಬೇಕು. ಸಿಎಸ್ಆರ್ ನಿಧಿಯಲ್ಲಿ ಶಾಲೆಗಳನ್ನು ಗ್ರಾಮೀಣ ಭಾಗದಲ್ಲಿ ನಿರ್ಮಾಣ ಮಾಡಬೇಕು. ನಮ್ಮ ಸರ್ಕಾರ ರಾಜ್ಯದಲ್ಲಿ 2 ಸಾವಿರ ಜಾಗಗಳನ್ನು ಗುರುತಿಸಿದ್ದು, ಪ್ರತಿ ಕಾರ್ಪೊರೇಟ್ ಸಂಸ್ಥೆ ಈ ಜಾಗಗಳಲ್ಲಿ ಅತ್ಯುತ್ತಮ ಮೂಲಸೌಕರ್ಯವಿರುವ ಶಾಲೆಗಳನ್ನು ನಿರ್ಮಾಣ ಮಾಡಬೇಕು” ಎಂದು ಹೇಳಿದರು.

“ನೀವು ನಮಗೆ ಹಣ ನೀಡಬೇಡಿ, ನೀವೇ ಹಣ ಹಾಕಿ ಶಾಲೆ ನಿರ್ಮಿಸಿ. ಶಾಲೆಗೆ ನಿಮ್ಮ ಸಂಸ್ಥೆಯ ಹೆಸರನ್ನು ಸೇರಿಸಿ. ಟೊಯೋಟಾ ಬೆಂಗಳೂರಿನಲ್ಲಿ 7-8 ಶಾಲೆಗಳನ್ನು ನಿರ್ಮಿಸುತ್ತಿವೆ. ಟೋಯೋಟಾದವರು ಪ್ರತಿ ಶಾಲೆಗೆ 10-15 ಕೋಟಿ ಹಣ ವೆಚ್ಚ ಮಾಡಿ ನಿರ್ಮಿಸುತ್ತಿದ್ದಾರೆ ಉಪ ಆಯುಕ್ತರು ನಿಮಗೆ ಜಾಗ ನೀಡುತ್ತಾರೆ. ಆ ಜಾಗದಲ್ಲಿ ನೀವು ಶಾಲೆ ನಿರ್ಮಿಸಬಹುದು. ನಿಮಗೆ ಒಬ್ಬರಿಂದಲೇ ಸಂಪೂರ್ಣ ಶಾಲೆಗಳನ್ನು ನಿರ್ಮಾಣ ಮಾಡಲು ಸಾಧ್ಯವಾಗದಿದ್ದರೆ, ಶಾಲೆಯ ಕೆಲವೊಂದು ಭಾಗವನ್ನು ನಿರ್ಮಾಣ ಮಾಡಲು ಅವಕಾಶ ಮಾಡಿಕೊಡಲಾಗುವುದು. ಇದಕ್ಕಾಗಿಯೇ ಒಂದು ವೇದಿಕೆ ರೂಪಿಸಲಾಗುವುದು” ಎಂದರು.

“ಸಿಎಸ್ಆರ್ ನಿಧಿಯನ್ನು ಮೊದಲು ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗಿಸಿ, ನಂತರ ಆರೋಗ್ಯ ಕ್ಷೇತ್ರದತ್ತ ಗಮನಹರಿಸಬಹುದು. ನಾವು ಈ ವಿಚಾರವಾಗಿ ನೀತಿ ರೂಪಿಸಿ, ಎಲ್ಲಾ ಕೈಗಾರಿಕೋದ್ಯಮಿಗಳ ಜೊತೆ ಚರ್ಚೆ ಮಾಡಲಾಗುವುದು. ಸಧ್ಯದಲ್ಲೇ ನಾನು ವಿವಿಧ ಕ್ಷೇತ್ರಗಳ ಉದ್ಯಮಗಳ ಜೊತೆ ಸಭೆ ಮಾಡಲಿದ್ದೇನೆ. ಇದರಿಂದ ಶಿಕ್ಷಣಕ್ಕೆ ನಗರಗಳತ್ತ ವಲಸೆ ಹೋಗುವುದನ್ನು ತಪ್ಪಿಸಬಹುದು. ನಮ್ಮ ಹಳ್ಳಿಯ ಮಕ್ಕಳು ಕೇವಲ ಬೆಂಗಳೂರು ಅಥವಾ ಇತರೆ ಭಾಗದ ಮಕ್ಕಳ ಜೊತೆ ಸ್ಪರ್ಧೆ ಮಾಡುತ್ತಿಲ್ಲ. ನಮ್ಮ ಮಕ್ಕಳು ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ” ಎಂದು ಹೇಳಿದರು.

***

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಗೊತ್ತುವಳಿ ಅಂಗೀಕಾರಕ್ಕೆ ಕಾನೂನು ತೊಡಕಿಲ್ಲ, ಸ್ವೀಕಾರ ಅವಶ್ಯಕ : ನ್ಯಾಯಮೂರ್ತಿ ನಾಗಮೋಹನದಾಸ್ ಸರ್ಕಾರಕ್ಕೆ ಪತ್ರ ಕರ್ನಾಟಕ ಸುದ್ದಿ

ಗೊತ್ತುವಳಿ ಅಂಗೀಕಾರಕ್ಕೆ ಕಾನೂನು ತೊಡಕಿಲ್ಲ, ಸ್ವೀಕಾರ ಅವಶ್ಯಕ : ನ್ಯಾಯಮೂರ್ತಿ ನಾಗಮೋಹನದಾಸ್ ಸರ್ಕಾರಕ್ಕೆ ಪತ್ರ

ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ ಅವರಿಗೆ ನಿನ್ನೆ ದಿ.17 ರಂದು ಪತ್ರ ಬರೆದಿರುವ ಅವರು, ಗೊತ್ತುವಳಿ ಅಂಗೀಕಾರಕ್ಕೆ ಯಾವುದೇ ರೀತಿಯ ಕಾನೂನು ತೊಡಕಿಲ್ಲದಾಗಿದ್ದು, ಈ ಸಂಬಂಧ ಸೂಕ್ತ  ಕ್ರಮ ಕೈಗೊಳ್ಳಬೇಕೆಂದ ಸಲಹೆ ನೀಡಿದ್ದಾರೆ. 

Admin