ಬ್ರೇಕಿಂಗ್
ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ 60 ಸಾವಿರ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ಮೂಲಕ ಪರ್ಯಾಯ ವ್ಯವಸ್ಥೆ : ಮುಖ್ಯಮಂತ್ರಿ ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ಬೆಳಗಾವಿ ಅರಣ್ಯ ವಲಯದ 7 ಜಲಪಾತ ವೀಕ್ಷಣೆಗೆ  ಇನ್ನೊಂದು ತಿಂಗಳಲ್ಲಿ ಪರಿಸರ ಸ್ನೇಹಿ ಇಕೋ ಟೂರಿಸಂ ಅವಕಾಶ : ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌   ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ 60 ಸಾವಿರ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ಮೂಲಕ ಪರ್ಯಾಯ ವ್ಯವಸ್ಥೆ : ಮುಖ್ಯಮಂತ್ರಿ ಕುಡಿಯುವ ನೀರಿನ ಸಮಸ್ಯೆಯ ನಿಭಾವಣೆಗೆ ಗ್ರಾಮೀಣ ಪ್ರದೇಶದ ಪ್ರತಿ‌ಕ್ಷೇತ್ರದ ಶಾಸಕರಿಗೆ ತಲಾ ಒಂದು ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಭಾರತ ಜೋಡೋ ಯುವಕ ಸಂಘ ಸ್ಥಾಪನೆಗೆ ಸಾವಿರ ಕೋಟಿ ರೂಪಾಯಿ ಮೀಸಲು - ಡಿ.ಕೆ. ಶಿವಕುಮಾರ ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ : ಪ್ರತ್ಯೇಕ ಮಂತ್ರಿಯೊಬ್ಬರ ನಿಯೋಜಿನೆ- ಮುಖ್ಯಮಂತ್ತಿ ಡಿ.ಕೆ.ಶಿವಕುಮಾರ್ ಬೆಳಗಾವಿ ಅರಣ್ಯ ವಲಯದ 7 ಜಲಪಾತ ವೀಕ್ಷಣೆಗೆ  ಇನ್ನೊಂದು ತಿಂಗಳಲ್ಲಿ ಪರಿಸರ ಸ್ನೇಹಿ ಇಕೋ ಟೂರಿಸಂ ಅವಕಾಶ : ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌   ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಮಳೆ: ಮೈದುಂಬಿ ಹರಿಯುತ್ತಿರುವ ನದಿಗಳು; ಕೆಳ ಹಂತದ ೭ ಸೇತುವೆಗಳು ಜಲಾವೃತ್ತ ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ ಅಂಗನವಾಡಿಯಿಂದ ಪಿಯುಸಿ ವರೆಗೂ ನಾಳೆ ರಜೆ
11 ಜುಲೈ 2026
ಸಾಹಿತಿ ದೇವನೂರು ಮಹಾದೇವರನ್ನು ಭೆಟ್ಟಿಯಾದ ಸಚಿವ ಯತೀಂದ್ರ ಸಿದ್ಧರಾಮಯ್ಯ
🏛️ ರಾಜಕೀಯ - ಆಡಳಿತ
Dr. K N Doddmani · · 82 ವೀಕ್ಷಣೆಗಳು

ಸಾಹಿತಿ ದೇವನೂರು ಮಹಾದೇವರನ್ನು ಭೆಟ್ಟಿಯಾದ ಸಚಿವ ಯತೀಂದ್ರ ಸಿದ್ಧರಾಮಯ್ಯ

ಸಚಿವನಾದ ಬಳಿಕ ಅವರನ್ನು ಭೇಟಿಯಾಗಿ ಕೆಲ ಕ್ಷಣಗಳನ್ನು ಅವರೊಂದಿಗೆ ಕಳೆಯುವ ಜೊತೆಗೆ, ಪ್ರಸ್ತುತ ವಿದ್ಯಮಾನಗಳ ಕುರಿತು ಸಕಾರಾತ್ಮಕ ವಿಚಾರ ವಿನಿಮಯ ನಡೆಸಿದ್ದು ನಿಜಕ್ಕೂ ಸಂತಸ ಮತ್ತು ತೃಪ್ತಿ ನೀಡಿತು ಎಂದಿದ್ದಾರೆ.

ಸಾಹಿತಿ ದೇವನೂರು ಮಹಾದೇವರನ್ನು ಭೆಟ್ಟಿಯಾದ ಸಚಿವ ಯತೀಂದ್ರ ಸಿದ್ಧರಾಮಯ್ಯ

**

ಹಿರಿಯ ಸಾಹಿತಿ, ಚಿಂತಕ ಹಾಗೂ ಕನ್ನಡದ ಸಾಕ್ಷಿ ಪ್ರಜ್ಞೆ ಎಂದು ಗುರುತಿಸಲ್ಪಡುವ ದೇವನೂರು ಮಹಾದೇವ ಅವರನ್ನು ನಗರಾಭಿವೃದ್ಧಿ ಖಾತೆ ಸಚಿವ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪುತ್ರ ಯತೀಂದ್ರ ಸಿದ್ಧರಾಮಯ್ಯ ಅವರು ಭೆಟ್ಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು,

ಮೈಸೂರಿನಲ್ಲಿ ಇಂದು ಹಿರಿಯ ಸಾಹಿತಿ ನನ್ನ ನೆಚ್ಚಿನ ಲೇಖಕರು ಆದ ದೇವನೂರು ಮಹಾದೇವ ಅವರನ್ನು ಭೇಟಿ ಮಾಡಿ, ಅವರ ಕುಶಲೋಪರಿ ವಿಚಾರಿಸುವ ಅವಕಾಶ ದೊರೆಯಿತು ಎಂದು ತಿಳಿಸಿದ್ದಾರೆ.

ನಮ್ಮಿಬ್ಬರ ಆತ್ಮೀಯ ಸಂಬಂಧಕ್ಕೆ ಹಲವು ವರ್ಷಗಳ ಸಾಂಗತ್ಯವಿದೆ. ಸಾಮಾಜಿಕ ನ್ಯಾಯ, ಮಾನವೀಯ ಮೌಲ್ಯಗಳು ಹಾಗೂ ಪ್ರಜಾಪ್ರಭುತ್ವದ ಆಶಯಗಳ ಕುರಿತು ಅವರಿಂದ ಪಡೆದ ಮಾರ್ಗದರ್ಶನ ನನ್ನ ಸಾರ್ವಜನಿಕ ಬದುಕಿಗೆ ಸದಾ ಪ್ರೇರಣೆಯಾಗಿದೆ.

ಸಚಿವನಾದ ಬಳಿಕ ಅವರನ್ನು ಭೇಟಿಯಾಗಿ ಕೆಲ ಕ್ಷಣಗಳನ್ನು ಅವರೊಂದಿಗೆ ಕಳೆಯುವ ಜೊತೆಗೆ, ಪ್ರಸ್ತುತ ವಿದ್ಯಮಾನಗಳ ಕುರಿತು ಸಕಾರಾತ್ಮಕ ವಿಚಾರ ವಿನಿಮಯ ನಡೆಸಿದ್ದು ನಿಜಕ್ಕೂ ಸಂತಸ ಮತ್ತು ತೃಪ್ತಿ ನೀಡಿತು ಎಂದಿದ್ದಾರೆ.

ಈ ಹಿಂದಿ ಸಿದ್ಧರಾಮಯ್ಯ ಸಹಿತ ತಾವು ಮುಖ್ಯಮಂತ್ರಿಯಾದಾಗ ದೇವನೂರು ಮಹಾದೇವ ಅವರನ್ನು ಕಂಡು ಮಾತನಾಡಿಸಿದ್ದರು. ರೈತ ಹೋರಾಟಗಾರ ಎಂ.ಡಿ.‌ನಂಜುಂಡಸ್ವಾಮಿ ಅವರ ಗರಡಿಯಲ್ಲಿ ಪಳಗಿದ ಇವರು ಮೈಸೂರು ಸೇರಿದಂತೆ ರಾಜ್ಯದ ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು. ಹೀಗಾಗಿ ಸಿದ್ಧರಾಮಯ್ಯನವರ ಪುತ್ರ ಯತೀಂದ್ರ ಅವರೂ ದೇವನೂರು ಅವರೊಂದಿಗೆ ಒಡನಾಟ ಹೊಂದಿದ್ದು, ಪ್ರಸ್ತುತ ಸಚಿವ ಸ್ಥಾನ ವಹಿಸಿಕೊಂಡ ನಂತರ ತಮ್ಮ ಕಾರ್ಯತತ್ಪರತೆಯ ಮಾರ್ಗದರ್ಶನದ ಹಿನ್ನೆಲೆಯಲ್ಲಿ ಭೆಟ್ಟಿಯಾದ ಹೊಸ ತಲೆಮಾರಿನ ರಾಜಕಾರಣಿ. ಈ ಹಿಂದೆ ಮಧು ಬಂಗಾರಪ್ಪ, ಸಚಿವ ಎಚ್.ಸಿ. ಮಹಾದೇವಪ್ಪ, ಸತೀಶ್ ಜಾರಕಿಹೊಳಿ ಅವರೂ ದೇವರ ಮಹಾದೇವರನ್ನು ಅವರ ಮನೆಗೆ ತೆರಳಿ ಸಮಾಲೋಚನೆ ನಡೆಸಿದ್ದಾರೆ.

ಸಾಹಿತಿಗಳು ರಾಜಕಾರಣಿಗಳೊಂದಿಗೆ ಸಂಬಂಧ ಇಂದು ಸಾಮಾನ್ಯವಾಗಿದ್ದು, ಬಹಳಷ್ಟು ಬರಹಗಾರರು ರಾಜಕಾರಣಿಗಳೊಂದಿಗೆ ಬಹಿರಂಗವಾಗಿ ಗುರುತಿಸಿಕೊಂಡಿದ್ದಾರೆ. ಆದರೆ, ಉಳಿದವರಂತೆ ದೇವನೂರು ಪ್ರಭುತ್ವದ ಬಾಲಂಗೂಜಿ ಆಗದ ಜನಪರ ಅಸ್ಮಿತೆ ಹೊಂದಿದ ಸ್ವಾಭಿಮಾನಿ ಎಂದು ಸಾಹಿತಿ - ಸಾಂಸ್ಕೃತಿಕ ವಲಯದಲ್ಲಿ ಗುರುತಿಸಲಾಗುತ್ತದೆ.‌ ಪ್ರಭುತ್ವದ ಒಡನಾಟವಿದ್ದರೂ ವೈಯಕ್ತಿಕ ಸ್ಥಾನ -ಮಾನದ ಅವಕಾಶವಾದಕ್ಕೆ ಹಪಹಪಿಸಿದವರಲ್ಲ. ಜನಪರ ವಿಚಾರಗಳಿಗೆ ಪ್ರಾಧಾನ್ಯತೆ ಹೊಂದಿರುವದರಿಂದ ಪ್ರಗತಿಪರ ವಿಚಾರಧಾರೆ ರಾಜಕಾರಣಿಗಳು ಸಹಜ ದೇವನೂರು ಭೆಟ್ಟಿ ಸಹಜವಾಗಿರುತ್ತದೆ.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ  AI ರೇಖಾ ಚಿತ್ರಗಳನ್ನು ಹಂಚಿಕೊಂಡ   ಮುಖ್ಯಮಂತ್ರಿ ರಾಜಕೀಯ - ಆಡಳಿತ

ಶರಣರ ಅನುಭವ ಮಂಟಪಕ್ಕೆ ಭೆಟ್ಟಿ ನೀಡಿದ AI ರೇಖಾ ಚಿತ್ರಗಳನ್ನು ಹಂಚಿಕೊಂಡ ಮುಖ್ಯಮಂತ್ರಿ

ಜಗತ್ತಿನ ಪ್ರಪ್ರಥಮ ಆಧ್ಯಾತ್ಮಿಕ ಸಂಸತ್ತು ಅನುಭವ ಮಂಟಪದ ದಿವ್ಯ ಸನ್ನಿಧಿಗೆ ನಿನ್ನೆ ನಾನು ಭೇಟಿ ನೀಡಿದ್ದಾಗ ಮೂಡಿಬಂದ ಕಲ್ಪನಾ ಲೋಕದ ಸುಂದರ AI ಆಧಾರಿತ ರೇಖಾಚಿತ್ರಗಳು ಇಲ್ಲಿವೆ.

Admin
ಸಂವಿಧಾನ ಹಾಗೂ ಬಾಬಾಸಾಹೇಬರ ಸಿದ್ಧಂತಕ್ಕೆ ಅನುಸಾರ ರಾಜಕೀಯ ಮಾಡುತ್ತ ಬಂದಿದ್ದೇನೆ - ಮಾಜಿ ಸಚಿವ ಎಚ್.ಸಿ. ಮಹಾದೇವಪ್ಪ ಸ್ಪಷ್ಟನೆ ರಾಜಕೀಯ - ಆಡಳಿತ

ಸಂವಿಧಾನ ಹಾಗೂ ಬಾಬಾಸಾಹೇಬರ ಸಿದ್ಧಂತಕ್ಕೆ ಅನುಸಾರ ರಾಜಕೀಯ ಮಾಡುತ್ತ ಬಂದಿದ್ದೇನೆ - ಮಾಜಿ ಸಚಿವ ಎಚ್.ಸಿ. ಮಹಾದೇವಪ್ಪ ಸ್ಪಷ್ಟನೆ

ಸಾರ್ವಜನಿಕ ಜೀವನದಲ್ಲಿ ಇರುವವರು ಯಾರೂ ಸಹ ಪ್ರಶ್ನಾತೀತರಲ್ಲ ಎಂಬ ಅರಿವು ನನಗೂ ಇದೆ.‌ ಆದರೆ ದುರುದ್ದೇಶಪೂರಿತವಾದ ಅಪಪ್ರಚಾರ, ಸುಳ್ಳು ಆಪಾದನೆ, ಅಸಹನೆ ಮತ್ತು ಕುತಂತ್ರಗಳಿಗೆ ಜಾಗ ಇರಬಾರದು.

Admin