ಬ್ರೇಕಿಂಗ್
ಗೊತ್ತುವಳಿ ಅಂಗೀಕರಿಸದಿದ್ದರೆ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಯೊಂದಿಗೆ ಚರ್ಚೆ - ಸಚಿವ ಯತೀಂದ್ರ ಸಿದ್ಧರಾಮಯ್ಯ ಎಚ್ಚರಿಕೆ ಸಕಾಲಕ್ಕೆ ಮಾಹಿತಿ‌ ಒದಗಿಸದ ತಹಶೀಲ್ದಾರ ಸೇರಿ ಮೂವರಿಗೆ ತಲಾ 10 ಸಾವಿರ ದಂಡ “ಪ್ರಾಚೀನ ಬೌದ್ಧ ತಾಣ ಸಾರನಾಥ” ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರ್ಪಡೆ ಕಾರ್ಗಿಲ್ ವಿಜಯೋತ್ಸವ : ಮರಾಠಾ ಲಘು ಪದಾತಿದಳದ ಸೈನಿಕರ ಸಾಹಸ ಸುವರ್ಣಾಕ್ಷರ ಕಾರ್ಗಿಲ್‌ ವಿಜಯೋತ್ಸವ ನಿಮಿತ್ತ ಬೈಕ್‌ ರ್ಯಾಲಿ ವಿಶ್ವದ TEDx ಭಾಷಣಗಾರ್ತಿ ಗಿನ್ನೆಸ್ ದಾಖಲೆ ಅರ್ನಾ ಜೇವನಗೌಡರಿಗೆ ಜಿಲ್ಲಾ ಆಡಳಿತ ಸನ್ಮಾನ ಮೌಂಟ್ ಎವರೆಸ್ಟ್ ಏರಿದ ಸಂತೋಷ್ ಹಾಗೂ ಚಿನ್ಮಯಿಗೆ ಗೌರವ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ ಸರ್ಕಾರಿ ಶಾಲೆಗಳನ್ನು ಉದ್ಯಮಿಗಳು ದತ್ತಕ ತೆಗೆದುಕೊಳ್ಳಬಹುದು : ಸಿಇಓ ಬೆಳಗಾವಿ ಜಿಲ್ಲೆಯ 175 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ  ಅಭಿವೃದ್ಧಿ ಪಡಿಸಲು ಸರ್ಕಾರ ನಿರ್ಧಾರ ಗೊತ್ತುವಳಿ ಅಂಗೀಕರಿಸದಿದ್ದರೆ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಯೊಂದಿಗೆ ಚರ್ಚೆ - ಸಚಿವ ಯತೀಂದ್ರ ಸಿದ್ಧರಾಮಯ್ಯ ಎಚ್ಚರಿಕೆ ಸಕಾಲಕ್ಕೆ ಮಾಹಿತಿ‌ ಒದಗಿಸದ ತಹಶೀಲ್ದಾರ ಸೇರಿ ಮೂವರಿಗೆ ತಲಾ 10 ಸಾವಿರ ದಂಡ “ಪ್ರಾಚೀನ ಬೌದ್ಧ ತಾಣ ಸಾರನಾಥ” ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರ್ಪಡೆ ಕಾರ್ಗಿಲ್ ವಿಜಯೋತ್ಸವ : ಮರಾಠಾ ಲಘು ಪದಾತಿದಳದ ಸೈನಿಕರ ಸಾಹಸ ಸುವರ್ಣಾಕ್ಷರ ಕಾರ್ಗಿಲ್‌ ವಿಜಯೋತ್ಸವ ನಿಮಿತ್ತ ಬೈಕ್‌ ರ್ಯಾಲಿ ವಿಶ್ವದ TEDx ಭಾಷಣಗಾರ್ತಿ ಗಿನ್ನೆಸ್ ದಾಖಲೆ ಅರ್ನಾ ಜೇವನಗೌಡರಿಗೆ ಜಿಲ್ಲಾ ಆಡಳಿತ ಸನ್ಮಾನ ಮೌಂಟ್ ಎವರೆಸ್ಟ್ ಏರಿದ ಸಂತೋಷ್ ಹಾಗೂ ಚಿನ್ಮಯಿಗೆ ಗೌರವ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ತೆಗೆದುಕೊಳ್ಳಲೇಬೇಕು, ಇಲ್ಲಂದ್ರೆ ಶುಲ್ಕ ಕಡಿತ : ಮುಖ್ಯಮಂತ್ರಿ ಎಚ್ಚರಿಕೆ ಸರ್ಕಾರಿ ಶಾಲೆಗಳನ್ನು ಉದ್ಯಮಿಗಳು ದತ್ತಕ ತೆಗೆದುಕೊಳ್ಳಬಹುದು : ಸಿಇಓ ಬೆಳಗಾವಿ ಜಿಲ್ಲೆಯ 175 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ  ಅಭಿವೃದ್ಧಿ ಪಡಿಸಲು ಸರ್ಕಾರ ನಿರ್ಧಾರ
29 ಜುಲೈ 2026
ಬೆಳಗಾವಿ ಜಿಲ್ಲೆಯ 175 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ  ಅಭಿವೃದ್ಧಿ ಪಡಿಸಲು ಸರ್ಕಾರ ನಿರ್ಧಾರ
🎓 ಶಿಕ್ಷಣ
Dr. K N Doddmani · · 98 ವೀಕ್ಷಣೆಗಳು

ಬೆಳಗಾವಿ ಜಿಲ್ಲೆಯ 175 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ  ಅಭಿವೃದ್ಧಿ ಪಡಿಸಲು ಸರ್ಕಾರ ನಿರ್ಧಾರ

ಸರ್ಕಾರಿ ಶಾಲೆಯ ಮಕ್ಕಳಿಗೆ ಎಲ್.ಕೆ.ಜಿ.ಯಿಂದ ದ್ವಿತೀಯ ಪಿಯುಸಿ ವರೆಗೆ ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸಿ.ಸಿ.ಎಸ್.ಆರ್ ನಿಧಿಯ ಸಮರ್ಪಕ ಬಳಕೆಗಾಗಿ ಜಿಲ್ಲಾ ಮಟ್ಟದಲ್ಲಿ ಸಿ.ಸಿ.ಎಸ್.ಆರ್ ಕೋಶವನ್ನು ರಚಿಸಲಾಗಿದೆ.

ಅಸ್ಮಿತೆ ವರದಿ, ಜು.೨೩: ಬೆಳಗಾವಿ ಜಿಲ್ಲೆಯ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ  (ಕೆಪಿಎಸ್) ಅಭಿವೃದ್ಧಿ ಪಡಿಸಲು ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ (ಸಿ.ಎಸ್.ಆರ್) ನಿಧಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಮುಂದಾಗಿರುವ ಸರ್ಕಾರ ಜಿಲ್ಲೆಯ ಬೆಳಗಾವಿ ಶೈಕ್ಷಣಿಕ ವಿಭಾಗದಲ್ಲಿ ೯೧ ಸರ್ಕಾರಿ ಶಾಲೆಗಳು ಹಾಗೂ ಚಿಕ್ಕೋಡಿಶೈಕ್ಷಣಿಕಕ ವಿಭಾಗದಲ್ಲಿ ೮೪ ಸರ್ಕಾರಿ ಶಾಲೆಗಳು ಸೇರಿ ಒಟ್ಟು ೧೭೫ ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಪರಿವರ್ತಿಸಲು ಸರ್ಕಾರ ಅನುಮೋದನೆ ನೀಡಿದೆ.

ಈ ಶಾಲೆಗಳ ಅಭಿವೃದ್ಧಿಗೆ ಬೆಳಗಾವಿ ವಿಭಾಗದಲ್ಲಿ ೨೪ ಉದ್ಯಮ ಸಂಸ್ಥೆಗಳು ಹಾಗೂ ಚಿಕ್ಕೋಡಿ ವಿಭಾಗದಲ್ಲಿ ೨೫ ಉದ್ಯಮ ಸಂಸ್ಥೆಗಳನ್ನು ಸಿ.ಎಸ್.ಆರ್ ನಿಧಿಯ ಬಳಕೆಗೆ ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ ಇಂದು  ಜರುಗಿದ ಸಮುದಾಯ ಮತ್ತು ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ (ಸಿ.ಸಿ.ಎಸ್.ಆರ್) ಅನುಷ್ಠಾನ ಜಿಲ್ಲಾ ಕೋಶದ ಸಭೆಯಲ್ಲಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಯ ಮಕ್ಕಳಿಗೆ ಎಲ್.ಕೆ.ಜಿ.ಯಿಂದ ದ್ವಿತೀಯ ಪಿಯುಸಿ ವರೆಗೆ ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸಿ.ಸಿ.ಎಸ್.ಆರ್ ನಿಧಿಯ ಸಮರ್ಪಕ ಬಳಕೆಗಾಗಿ ಜಿಲ್ಲಾ ಮಟ್ಟದಲ್ಲಿ ಸಿ.ಸಿ.ಎಸ್.ಆರ್ ಕೋಶವನ್ನು ರಚಿಸಲಾಗಿದೆ. ಸಿ.ಎಸ್.ಆರ್ ನಿಧಿಯನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು  ಹಾಗೂ ಉದ್ಯಮಿಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಸಿ.ಎಸ್.ಆರ್ ನಿಧಿಯನ್ನು ಶಾಲಾ ಕಟ್ಟಡ ಸ್ಮಾರ್ಟ ತರಗತಿಗಳು, ಕಂಪ್ಯೂಟರ್ ಪ್ರಯೋಗಾಲಯ, ಡಿಜಿಟಲ್ ಗ್ರಂಥಾಲಯ, ಹೈಟೆಕ್ ಶೌಚಾಲಯ, ಸಾರಿಗೆ ವ್ಯವಸ್ಥೆ, ಅತಿಥಿ ಶಿಕ್ಷಕರ ವೇತನ ಸೇರಿ ಶಾಲೆಯ ಸಮಗ್ರ ಅಭಿವೃದ್ಧಿಗೆ ಬಳಸಿಕೊಳ್ಳಬೇಕು. ಜಿಲ್ಲೆಯ ಶಿಕ್ಷಣ ವ್ಯವಸ್ಥೆ ಸುಧಾರಣೆ ಹಾಗೂ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಅವರು ನಿರ್ದೇಶನ ನೀಡಿದ್ದಾರೆ

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಸರ್ಕಾರಿ ಶಾಲೆಗಳನ್ನು ಉದ್ಯಮಿಗಳು ದತ್ತಕ ತೆಗೆದುಕೊಳ್ಳಬಹುದು : ಸಿಇಓ ಶಿಕ್ಷಣ

ಸರ್ಕಾರಿ ಶಾಲೆಗಳನ್ನು ಉದ್ಯಮಿಗಳು ದತ್ತಕ ತೆಗೆದುಕೊಳ್ಳಬಹುದು : ಸಿಇಓ

ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಆಸಕ್ತ ಉದ್ಯಮ ಸಂಸ್ಥೆಯವರು ನಮ್ಮ ಶಾಲೆ-ನನ್ನ ಕೊಡುಗೆ ಪೋರ್ಟಲ್ ನಲ್ಲಿ (http://nsnk.karnataka.gov.in) ನೋಂದಣಿ ಮಾಡಿಕೊಳ್ಳುವ ಮೂಲಕ ಶಾಲೆಗಳನ್ನು ದತ್ತು ಪಡೆದುಕೊಳ್ಳಬಹುದಾಗಿದೆ.

Admin