ಬ್ರೇಕಿಂಗ್
ನಾಡಗೀತೆಯಲ್ಲಿ ಬೌದ್ಧ ಧರ್ಮದ ಹೆಸರು ಸೇರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಮನವಿ ಹಕ್ಕಿ-ಪಿಕ್ಕಿ ಸಮುದಾಯದ ಮೂಲಭೂತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಮಟ್ಟದಲ್ಲಿ ಕ್ರಮ - ಸಿಇಓ ಬೆಳಗಾವಿ ಪಾಲಿಕೆಗೆ ಅನುದಾನ ಬಿಡುಗಡೆ ಮಾಡದಂತೆ ಗಡಿ ಕನ್ನಡ ಸೇನೆ ಆಗ್ರಹ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನ್ಯರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವುದು ಸಾಂವಿಧಾನಿಕ ಚೌಕಟ್ಟಿಗೆ ವಿರುದ್ಧವಾಗಿದೆ : ಬಿಜೆಪಿ ಬಸವ ಕಾಯಕಜೀವಿಗಳ ಸಂಘದಿಂದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಪುಸ್ತಕ ವಿತರಣೆ ಪಾಲಿಕೆಗೆ 250 ಕೋಟಿ ವಿಶೇಷ ಅನುದಾನ ಕೋರಿ ಸಿಎಂ ಗೆ ಮೇಯರ್, ಉಪಮೇಯರ್ ಮನವಿ ಮೂರು ದಿನಗಳ RSS ಬೈಟಕ್ ಮುಕ್ತಾಯ: ಶ್ರೀರಾಮ ಜನ್ಮಭೂಮಿ ಮಂದಿರದ ದಾನ ಪೆಟ್ಟಿಗೆಯ ಕಾಣಿಕೆಯ ಅಕ್ರಮಕ್ಕೆ ಖೇದ ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಡಗೀತೆಯಲ್ಲಿ ಬೌದ್ಧ ಧರ್ಮದ ಹೆಸರು ಸೇರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಮನವಿ ಹಕ್ಕಿ-ಪಿಕ್ಕಿ ಸಮುದಾಯದ ಮೂಲಭೂತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಮಟ್ಟದಲ್ಲಿ ಕ್ರಮ - ಸಿಇಓ ಬೆಳಗಾವಿ ಪಾಲಿಕೆಗೆ ಅನುದಾನ ಬಿಡುಗಡೆ ಮಾಡದಂತೆ ಗಡಿ ಕನ್ನಡ ಸೇನೆ ಆಗ್ರಹ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನ್ಯರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವುದು ಸಾಂವಿಧಾನಿಕ ಚೌಕಟ್ಟಿಗೆ ವಿರುದ್ಧವಾಗಿದೆ : ಬಿಜೆಪಿ ಬಸವ ಕಾಯಕಜೀವಿಗಳ ಸಂಘದಿಂದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಪುಸ್ತಕ ವಿತರಣೆ ಪಾಲಿಕೆಗೆ 250 ಕೋಟಿ ವಿಶೇಷ ಅನುದಾನ ಕೋರಿ ಸಿಎಂ ಗೆ ಮೇಯರ್, ಉಪಮೇಯರ್ ಮನವಿ ಮೂರು ದಿನಗಳ RSS ಬೈಟಕ್ ಮುಕ್ತಾಯ: ಶ್ರೀರಾಮ ಜನ್ಮಭೂಮಿ ಮಂದಿರದ ದಾನ ಪೆಟ್ಟಿಗೆಯ ಕಾಣಿಕೆಯ ಅಕ್ರಮಕ್ಕೆ ಖೇದ ಎಸ್‌ಐಆರ್ (SIR) ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದೆ ಸಚಿವ ಸತೀಶ್ ಜಾರಕಿಹೊಳಿ ವೈಜ್ಞಾನಿಕತೆ ಶಿಕ್ಷಣದಲ್ಲಿ ಬರದೆ ಹೋದರೆ ಮೌಢ್ಯಗಳು ಹಾಗೆ ಮುಂದುವರಿಯುವಂತ ಕೆಲಸಗಳು ನಡೆಯುತ್ತದೆ - ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ
16 ಜುಲೈ 2026
ಎಂಜನಿಯರಿಂಗ್ ಪರೀಕ್ಷೆ ಮುಗಿಸಿ ಹೊರಬರುವಷ್ಟರಲ್ಲಿ ಫಲಿತಾಂಶ ಲಭ್ಯ - ವಿಟಿಯು ಸಾಧನೆ
🎓 ಶಿಕ್ಷಣ
Dr. K N Doddmani · · 149 ವೀಕ್ಷಣೆಗಳು

ಎಂಜನಿಯರಿಂಗ್ ಪರೀಕ್ಷೆ ಮುಗಿಸಿ ಹೊರಬರುವಷ್ಟರಲ್ಲಿ ಫಲಿತಾಂಶ ಲಭ್ಯ - ವಿಟಿಯು ಸಾಧನೆ

6ನೇ ಸೆಮಿಸ್ಟರ್ ಪರೀಕ್ಷೆಗೆ ರಾಜ್ಯದ ವಿವಿಧ ಕಾಲೇಜುಗಳಲ್ಲಿ  60 ಸಾವಿರದ 856 ವಿದ್ಯಾರ್ಥಿಗಳು ಹಾಜರಿದ್ದರು. ಈ ಪೈಕಿ 46 ಸಾವಿರದ 762 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಪ್ರತಿಶತ 76.84 ಫಲಿತಾಂಶ ದಾಖಲಾಗಿದೆ. ಇತ್ತೀಚಿಗೆ 8 ನೇ ಸೆಮಿಸ್ಟರ್ ಫಲಿತಾಂಶವನ್ನು ಕೇವಲ 10 ನಿಮಿಷದಲ್ಲಿ ಪ್ರಕಟಿಸಲಾಗಿತ್ತು. ಈ ಮೂಲದ  ಫಲಿತಾಂಶ ಪ್ರಕಟಿಸಲು 10 ರಿಂದ 12 ದಿನಗಳ ತೆಗೆದುಕೊಳ್ಳಲಾಗುತ್ತಿತ್ತು. ಪ್ರಸ್ತುತ 5 ನಿಮಿಷದಲ್ಲಿ ಫಲಿತಾಂಶ ನೀಡಲಾಗಿದೆ.

ಎಂಜನಿಯರಿಂಗ್ ಪರೀಕ್ಷೆ ಮುಗಿಸಿ ಹೊರಬರುವಷ್ಟರಲ್ಲಿ ಫಲಿತಾಂಶ ಲಭ್ಯ - ವಿಟಿಯು ಸಾಧನೆ

**

ಅಸ್ಮಿತೆ ಸುದ್ದಿ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅಧೀನದ ರಾಜ್ಯದ ವಿವಿಧ ಎಂಜನಿಯರಿಂಗ್ ‌ಕಾಲೇಜುಗಳಲ್ಲಿ 6 ನೇ ಸೆಮಿಸ್ಟರ್ ನಲ್ಲಿ   ಓದುತ್ತಿರುವ ಸುಮಾರು 60 ಸಾವಿರ ವಿದ್ಯಾರ್ಥಿಗಳು ಇಂದು ಸಂಜೆ 5.30ಕ್ಕೆ  ಕೊನೆಯ ಪ್ರಾಯೋಗಿಕ ಪರೀಕ್ಷೆ ಮುಗಿಸಿ ಹೊರ ಬರುವಷ್ಟರಲ್ಲಿ ಅಂದರೆ  5 ನಿಮಿಷದಲ್ಲಿ ವಿಟಿಯು ಫಲಿತಾಂಶ ಪ್ರಕಟಿಸಿ ದಾಖಲೆ ಸೃಷ್ಟಿಸಿದೆ.

ಕಳೆದ 15 ದಿನಗಳಿಂದ ನಡೆದ ಲಿಖಿತ ಪರೀಕ್ಷೆಯ ಡಿಜಿಟಲ್ ಮೌಲ್ಯಮಾಪನ ಒಂದು ವಾರಕಾಲ ಪೂರ್ಣಗೊಳಿಸಿ ಅಂಕಗಳನ್ನು ಅಪ್ಲೋಡ್ ಮಾಡಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆಯಾ ಪ್ರಾಯೋಗಿಕ ಪರೀಕ್ಷೆ ಮುಕ್ತಾಯದ ನಂತರ ತಾಂತ್ರಿಕ ಸಹಾಯದಿಂದ ಅಂಕಗಳನ್ನು ಭರ್ತಿ ಮಾಡಲಾಗಿತ್ತು. ಇಂದು ಕೊನೆಯ ಪ್ರಾಯೋಗಿಕ ಪರೀಕ್ಷೆ ಮುಗಿದ ಐದು ನಿಮಿಷದಲ್ಲಿ ಆಯಾ ಕಾಲೇಜು ಕೇಂದ್ರಗಳಿಂದ ಅಂಕಗಳ ಅಪ್ಲೋಡ್ ಮಾಡಿ ತಕ್ಷಣ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಮೊಬೈಲ್ ಗಳಿಗೆ ಫಲಿತಾಂಶದ ಎಸ್.ಎಮ್.ಎಸ್. ಮಾಹಿತಿಯನ್ನು ರವಾನಿಸುವುದರ ಮೂಲಕ ವಿಟಿಯು ತನ್ನ ತಾಂತ್ರಿಕ ಮಹೋನ್ನತಿಯನ್ನು ಸಾಬೀತುಪಡಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಕುಲಸಚಿವ ಡಾ.ಪ್ರಸಾದ ಬಿ. ರಾಂಪುರೆ, ಆಧುನಿಕ ತಾಂತ್ರಿಕತೆಯ ಸಹಕಾರ, ವಿಶ್ವವಿದ್ಯಾಲಯದ ಕುಲಪತಿ ಪ್ರೊಫೆಸರ್ ಎಸ್. ವಿದ್ಯಾಶಂಕರ ಅವರ ಕ್ರಿಯಾಶೀಲತೆ ಮತ್ತು ಎಲ್ಲ ಸಿಬ್ಬಂದಿ ವರ್ಗದ ಸಾಮೂಹಿಕ ಜವಾಬ್ದಾರಿ ನಿರ್ವಹಣೆಯಿಂದಾಗಿ ವಿದ್ಯಾರ್ಥಿಗಳಿಗೆ ತ್ವರಿತವಾಗಿ ಫಲಿತಾಂಶ ನೀಡುವುದರ ಮೂಲಕ ವಿಟಿಯು ಐತಿಹಾಸಿಕ ದಾಖಲೆ ನಿರ್ಮಿಸಿದೆ. ವಿದ್ಯಾರ್ಥಿಗಳ ಮುಂದಿನ ಓದು ಅಥವಾ ಭವಿಷ್ಯ ನಿರ್ಮಾಣಕ್ಕೆ ಅನುಕೂಲತೆಯ ದೃಷ್ಟಿಯಿಂದ ತಾಂತ್ರಿಕ ಸಾಧನ ಬಳಸಿ ಫಲಿತಾಂಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಜಂಟಿ ಮಾಹಿತಿ

ವಿಟಿಯು ಮೌಲ್ಯಮಾಪನ ಕುಲಸಚಿವ ಪ್ರೊ.ಯು.ಜೆ.ಉಜ್ವಲ್, 6ನೇ ಸೆಮಿಸ್ಟರ್ ಪರೀಕ್ಷೆಗೆ ರಾಜ್ಯದ ವಿವಿಧ ಕಾಲೇಜುಗಳಲ್ಲಿ  60 ಸಾವಿರದ 856 ವಿದ್ಯಾರ್ಥಿಗಳು ಹಾಜರಿದ್ದರು. ಈ ಪೈಕಿ 46 ಸಾವಿರದ 762 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಪ್ರತಿಶತ 76.84 ಫಲಿತಾಂಶ ದಾಖಲಾಗಿದೆ. ಇತ್ತೀಚಿಗೆ 8 ನೇ ಸೆಮಿಸ್ಟರ್ ಫಲಿತಾಂಶವನ್ನು ಕೇವಲ 10 ನಿಮಿಷದಲ್ಲಿ ಪ್ರಕಟಿಸಲಾಗಿತ್ತು. ಈ ಮೂಲದ  ಫಲಿತಾಂಶ ಪ್ರಕಟಿಸಲು 10 ರಿಂದ 12 ದಿನಗಳ ತೆಗೆದುಕೊಳ್ಳಲಾಗುತ್ತಿತ್ತು. ಪ್ರಸ್ತುತ 5 ನಿಮಿಷದಲ್ಲಿ ಫಲಿತಾಂಶ ನೀಡಲಾಗಿದೆ. ಫಲಿತಾಂಶ ಪ್ರಕಟಿಸುವ ಅವಸರದಲ್ಲಿ ದೋಷಗಳಿಗೆ ಅವಕಾಶ ಕೊಡದೆ, ಮೌಲ್ಯಮಾಪನದ ಗುಣಮಟ್ಟ ಕಾಯ್ದುಕೊಂಡು ಫಲಿತಾಂಶ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್, "ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿರುತ್ತಾರೆ. ಹೀಗಾಗಿ ನಾವು ಸಾಧ್ಯವಾದಷ್ಟು ಬೇಗ ಫಲಿತಾಂಶ ಪ್ರಕಟಿಸಲು ನಿರ್ಧರಿಸಿ, ಆ ಪ್ರಕಾರ ಸಿದ್ಧತೆ ನಡೆಸಿ ಫಲಿತಾಂಶ ಬಿಡುಗಡೆ ಮಾಡಿದ್ದೇವೆ. ಈ ಹಿಂದೆ ಅಂತಿಮ ವರ್ಷದ ವಿದ್ಯಾರ್ಥಿಗಳ ಫಲಿತಾಂಶವನ್ನು 10 ನಿಮಿಷಗಳ ಒಳಗಾಗಿ ಬಿಡುಗಡೆ ಮಾಡಲಾಗಿತ್ತು. ಇದಕ್ಕೆ ಸಹಕಾರ ನೀಡಿದ ವಿಟಿಯು ಆಡಳಿತ ಸಿಬ್ಬಂದಿ, ಪರೀಕ್ಷಾ ವಿಭಾಗದ ಸಿಬ್ಬಂದಿ ಮತ್ತು ಸಂಯೋಜಿತ ಕಾಲೇಜುಗಳ ಸಿಬ್ಬಂದಿಗೆ ಅಭಿನಂದನೆ ತಿಳಿಸುತ್ತೇನೆ" ಎಂದಿದ್ದಾರೆ.

**

ಈ ಲೇಖನ ಹಂಚಿಕೊಳ್ಳಿ

ಇನ್ನಷ್ಟು ಓದಿ

ಡಿಜಿಟಲ್‌ ವಾರಸುದಾರಿಕೆ ಮಕ್ಕಳೊಂದಿಗೆ  ಸಮನ್ವಯ ಸಾಧಿತ ಶಿಕ್ಷಣ ಅಗತ್ಯ - ಶಿಕ್ಷಣ ತಜ್ಞರಾದ ವಿಷ್ಣು ಶಿಂಧೆಯೊಂದಿಗೆ ಸಂವಾದ ಶಿಕ್ಷಣ

ಡಿಜಿಟಲ್‌ ವಾರಸುದಾರಿಕೆ ಮಕ್ಕಳೊಂದಿಗೆ  ಸಮನ್ವಯ ಸಾಧಿತ ಶಿಕ್ಷಣ ಅಗತ್ಯ - ಶಿಕ್ಷಣ ತಜ್ಞರಾದ ವಿಷ್ಣು ಶಿಂಧೆಯೊಂದಿಗೆ ಸಂವಾದ

ಪ್ರಾಧ್ಯಾಪಕರು, ಚಿಂತಕರು ಮತ್ತು ಸಂವೇದನಾಶೀಲ ಬರಹಗಾರರಾದ ಡಾ.ವಿಷ್ಣು ಶಿಂಧೆ ಅವರು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರ ಮಂಡ್ಯ ಇಲ್ಲಿ ವಿಶೇಷ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿದ್ಯಾರ್ಥಿಗಳ ಕೇಂದ್ರೀಕೃತ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಮಧ್ಯ ಸಮನ್ವಯ ಸಾಧಿಸಿದರೆ ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯ. ಮಕ್ಕಳನ್ನು ಸಾಮಾಜೀಕರಣಗೊಳಿಸಿ ವ್ಯಕ್ತಿತ್ವ ರೂಪಿಸಿದರೆ ಅದೇ ಕೌಶಲ್ಯ ಆಧಾರಿ ಶಿಕ್ಷಣ. ಇಂದಿನ ವಿದ್ಯಾರ್ಥಿಗಳು ಡಿಜಿಟಲ್ ವಾರಸುದಾರರರು - ಹೀಗೆ ಅಸ್ಮಿತೆಯೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

Admin